ಮನೆ ರಾಜ್ಯ ಸಹೋದರಿಯರ ಮೇಲೆ ಕಾಡಾನೆ ದಾಳಿ: ಅಕ್ಕ ಸಾವು, ತಂಗಿಯ ಸ್ಥಿತಿ ಗಂಭೀರ

ಸಹೋದರಿಯರ ಮೇಲೆ ಕಾಡಾನೆ ದಾಳಿ: ಅಕ್ಕ ಸಾವು, ತಂಗಿಯ ಸ್ಥಿತಿ ಗಂಭೀರ

0
ಸಾಂದರ್ಭಿಕ ಚಿತ್ರ

ರಾಮನಗರ: ಜಮೀನಿಗೆ ತೆರಳುತ್ತಿದ್ದ ಸಹೋದರಿಯರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ, ಅಕ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾನಗರದಲ್ಲಿ ನಡೆದಿದೆ.

Join Our Whatsapp Group

ಜಯಮ್ಮ (50) ಮೃತ ಮಹಿಳೆಯಾಗಿದ್ದು, ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂಡ ಮಹಿಲೆ ಎಂದು ತಿಳಿದು ಬಂದಿದೆ.

ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದಿನ ಲೇಖನಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಭೂಕಂಪ
ಮುಂದಿನ ಲೇಖನಶಕ್ತಿ ಯೋಜನೆಯಲ್ಲಿ ಒಂದು ವಾರದಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ ಎಷ್ಟು ಗೊತ್ತಾ ?