ಮನೆ ಅಪರಾಧ ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ ಇಲಾಖೆ

ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದ ಅರಣ್ಯ ಇಲಾಖೆ

0
ಸಾಂದರ್ಭಿಕ ಚಿತ್ರ

ಬೆಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದ್ದು, ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡಕ್ಕೆ ಸ್ವಾಗತ ದೊರೆಯಲಿದೆ.

Join Our Whatsapp Group

ಈ ಮಧ್ಯೆ, ದಸರಾ ಗಜಪಡೆ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಅರಣ್ಯ ಇಲಾಖೆ ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ವಿಮೆ ಮಾಡಿಸಿದೆ.

ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದ.ಎ ಇದಕ್ಕಾಗಿ ವಿಮಾ ಕಂಪನಿಗೆ ಪ್ರೀಮಿಯಂ ಹಣ ಪಾವತಿ ಮಾಡಲಾಗಿದೆ.

ಆಗಸ್ಟ್​ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಗಜಪಡೆಗೆ ನಾಡಿಗೆ ಬಂದ ಸಂಧರ್ಭದಲ್ಲಿ ತಾಲೀಮು ಅಥವಾ ಇನ್ನಿತರ ಸಂಧರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವ ಸಾರ್ವಜನಿಕ ಆಸ್ತಿಗೆ ತೊಂದರೆಯಾದರೆ 50 ಲಕ್ಷ ರೂಪಾಯಿ ವರೆಗೆ ವಿಮೆ ಸೌಲಭ್ಯ ದೊರೆಯಲಿದೆ. ಅರಣ್ಯ ಇಲಾಖೆ ಒಟ್ಟು 2,37,50,000 ಕೋಟಿ ರೂಪಾಯಿ ಮೊತ್ತದ ವಿಮೆ ಮಾಡಿಸಿದೆ.

ಇಂದು ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿವೆ. ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅಗತ್ಯವಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.