ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಶಾಲಾ ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಬಗ್ಗೆ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡಲಾಗಿದೆ.
ಶಾಲಾ ಪಠ್ಯದಲ್ಲಿ ಲೋಪದೋಷಗಳನ್ನು ಸರಿಪಡಿಸುವಂತೆ ಸಮಿತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ ಜೊತೆ ಚರ್ಚೆ ಮಾಡಿರುವ ಸಿದ್ದರಾಮಯ್ಯ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ಲೋಪದೋಷಗಳು ಸರಿಪಡಿಸುವಂತೆ ಸಮಿತಿಗೆ ಹೇಳಿದ್ದಾರೆ.
ಯಾವ ಯಾವ ಪಾಠಗಳನ್ನು ಕೈಬಿಡಬೇಕು? ಪಾಠಗಳಲ್ಲಿ ಕೆಲ ಪದ ಬಳಿಕೆ ಎಲ್ಲಿಲ್ಲಿ ಸೇರಿಸಲಾಗಿದೆ? ಅದನ್ನ ಗುರುತಿಸುವಂತೆ ಸಿದ್ದರಾಮಯ್ಯ ಅವರು ಸಮಿತಿಗೆ ಸೂಚನೆ ನೀಡಿದ್ದು, ಇನ್ನೊಂದು ವಾರದಲ್ಲಿ ಪಠ್ಯ ಪರಿಷ್ಕರಣೆ ಲೋಪದೋಷ ಸಂಬಂಧ ವರದಿ ನೀಡುವಂತೆ ತಿಳಿಸಿದ್ದಾರೆ.
ಈ ಶೈಕ್ಷಣಿಕ ವರ್ಷದಲ್ಲಿ ಹೊಸ ಪಾಠಗಳ ಸೇರ್ಪಡೆ ಇಲ್ಲ. ಕಳೆದ ವರ್ಷ ಸೇರಿಸಲಾಗಿದ್ದ ಪಾಠಗಳಿಗೆ ಕತ್ತರಿ ಬೀಳುವ ಸಾಧ್ಯತೆ. ಆರ್.ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್, ಮತ್ತು ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಕ್ಕೆ ಕತ್ತರಿ ಬೀಳುವ ಸಾಧ್ಯತೆ ಎಂದು ತಿಳಿದುಬಂದಿದೆ. ಆದರೆ, 2023-24ನೇ ಶೈಕ್ಷಣಿಕ ಸಾಲಿಗೆ ಈಗಾಗಲೇ ಬಹುತೇಕ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕಗಳು ಮುದ್ರಣವಾಗಿ ಶಾಲೆಗಳನ್ನು ತಲುಪಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಪಠ್ಯ ಮುದ್ರಿಸುವ ಪ್ರಕ್ರಿಯೆಗೆ ಕೈಹಾಕುವುದಿಲ್ಲ.
ಬದಲಾಗಿ, ವಿತರಿಸಲಾಗಿರುವ ಪಠ್ಯದಲ್ಲಿ ವಿವಾದಿತ ಹಾಗೂ ಆಕ್ಷೇಪಣೆ ಕೇಳಿಬಂದಿರುವ ಪಾಠಗಳನ್ನು ಪಟ್ಟಿಮಾಡಿ, ಅವುಗಳನ್ನು ಮಕ್ಕಳಿಗೆ ಬೋಧನೆ ಮಾಡದಂತೆ ಶಾಲೆಗಳಿಗೆ ಸುತ್ತೋಲೆ ಹೊರಡಿಸುವ ಸಾಧ್ಯತೆಗಳಿವೆ. ಈ ವಿಚಾರವನ್ನು ಮುಂದಿನ ಸಚಿವ ಸಂಪುಟದಲ್ಲಿ ಮತ್ತೊಮ್ಮೆ ಚರ್ಚಿಸಿ ಅನಂತರ ಅಧಿಕೃತವಾಗಿ ಪ್ರಕಟಿಸಲಿದೆ ಎಂದು ತಿಳಿದುಬಂದಿದೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.