ಮನೆ ರಾಜಕೀಯ ಬಿಜೆಪಿ ಬೆಂಬಲಿಸುವ ನಟ ಸುದೀಪ್ ನಿರ್ಧಾರ ಸ್ವಾಗತಿಸಿದ ಮಾಜಿ ಸಿಎಂ ಬಿಎಸ್’ವೈ

ಬಿಜೆಪಿ ಬೆಂಬಲಿಸುವ ನಟ ಸುದೀಪ್ ನಿರ್ಧಾರ ಸ್ವಾಗತಿಸಿದ ಮಾಜಿ ಸಿಎಂ ಬಿಎಸ್’ವೈ

0

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರದ ನಿರ್ಧಾರವನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆ.

Join Our Whatsapp Group

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಟ ಸುದೀಪ್ ಪ್ರಚಾರ ವಿಚಾರದಲ್ಲಿ ಕಾಂಗ್ರೆಸ್ ಲೇವಡಿ  ಮಾಡುತ್ತಿದೆ.  ಕಾಂಗ್ರೆಸ್ ನವರಿಗೆ ತಲೆಕೆಟ್ಟು ಏನು ಬೇಕಾದರೂ ಮಾತನಾಡುತ್ತಾರೆ. ನಟ ಸುದೀಪ್ ಬಿಹೆಪಿಗೆ ಬೆಂಬಲ ನೀಡುತ್ತೇನೆ ಅಂತ ಹೇಳಿದ್ದಾರೆ. ನಮಗೆ ಸಿಗುತ್ತಿರುವ ಬೆಂಬಲವನ್ನ ಕಾಂಗ್ರೆಸ್ ನವರಿಗೆ  ಸಹಿಸೋಕೆ ಆಗುತ್ತಿಲ್ಲ ಎಂದು ತಿರುಗೇಟು ನೀಡಿದರು.

ವರುಣಾ ಕ್ಷೇತ್ರದಿಂದ ಸಚಿವ ವಿ. ಸೋಮಣ್ಣ ಸ್ಪರ್ಧೆ ವಿಚಾರ  ಈ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೂ ಅದೇ ಫೈನಲ್ ಆಗಲಿದೆ. ನಾಳೆ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್ ಗೆ ಕಳಿಸಲಾಗುತ್ತದೆ ಎಂದು ತಿಳಿಸಿದರು.

ಬಿಜೆಪಿಯ ಟಿಕೆಟ್ ಘೋಷಣೆ ಯಾವಾಗ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ,ನಾಳೆ ಪಟ್ಟಿಯನ್ನು ಹೈಕಮಾಂಡ್​ಗೆ ಕಳುಹಿಸಿಕೊಡಲಾಗುತ್ತದೆ. ಏಪ್ರಿಲ್ 8 ರಂದು ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಚರ್ಚಿಸಿ ನಂತರ ಹೈಕಮಾಂಡ್ ಪಟ್ಟಿ ಬಿಡುಗಡೆ ಮಾಡಲಿದೆ ಎಂದರು‌.

ಹಿಂದಿನ ಲೇಖನಎಸ್ ​ಎಸ್ ​ಎಲ್ ​ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕಾರ: 16 ಶಿಕ್ಷಕರ ಅಮಾನತು
ಮುಂದಿನ ಲೇಖನರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೊಡಿಸುವುದಾಗಿ ವಿದ್ಯಾರ್ಥಿನಿಗೆ 31 ಲಕ್ಷ ರೂ ವಂಚನೆ: ಆರೋಪಿ ಬಂಧನ