ಮನೆ ರಾಜಕೀಯ ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ

ಕಾಂಗ್ರೆಸ್ ಸೇರ್ಪಡೆಗೊಂಡ ಮಾಜಿ ಶಾಸಕ ಎಚ್.ಆರ್. ಗವಿಯಪ್ಪ

0

ಬೆಂಗಳೂರು(Bengaluru): ಮಾಜಿ ಶಾಸಕ ಎಚ್.ಆರ್. ಗವಿಯಪ್ಪ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಗವಿಯಪ್ಪ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಗವಿಯಪ್ಪ ಅವರು ನೂರಾರು ಬೆಂಬಲಿಗರೊಂದಿಗೆ ಕೆಪಿಸಿಸಿ ಕಚೇರಿಗೆ ಬಂದಿದ್ದರು. ಅವರೆಲ್ಲರೂ ಕಾಂಗ್ರೆಸ್ ಪಕ್ಷ ಸೇರಿದರು.

ಈ ಸಂದರ್ಭ ಮಾತನಾಡಿದ ಡಿ.ಕೆ ಶಿವಕುಮಾರ್, ಗವಿಯಪ್ಪ ಅವರು ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದರು. ಈಗ ಮತ್ತೆ ಮನೆಗೆ ಮರಳಿದ್ದಾರೆ  ಎಂದರು.

ಗವಿಯಪ್ಪ ಪಕ್ಷ ಸೇರ್ಪಡೆಯನ್ನು ವಿಜಯನಗರ ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು ವಿರೋಧಿಸಿರುವ ಕುರಿತು ಪ್ರತಿಕ್ರಿಯಿಸಿ, ಯಾರಿಗೂ ಯಾವ ಕುರ್ಚಿಯನ್ನೂ ಹಂಚಿಕೆ ಮಾಡಿಲ್ಲ. ರಾಜೀನಾಮೆ ಬೆದರಿಕೆ ಹಾಕುವವರ ಬಗ್ಗೆ ಪಕ್ಷ ತಲೆ ಕೆಡಿಸಿಕೊಳ್ಳುವುದಿಲ್ಲ. ಪಕ್ಷಕ್ಕಾಗಿ‌ ಕೆಲಸ ಮಾಡುವವರಷ್ಟೇ ಮುಖ್ಯ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಿಜಯನಗರ ಜಿಲ್ಲೆಗೆ ಭೇಟಿನೀಡಲಿದ್ದಾರೆ. ಅಲ್ಲಿ ಒಂದು ಬೃಹತ್ ಸಮಾವೇಶ ನಡೆಸಲಾಗುತ್ತದೆ ಎಂದರು.

ಹಿಂದಿನ ಲೇಖನಬ್ರಿಟನ್‌ನ ರಾಣಿ 2ನೇ ಎಲಿಜಬೆತ್ ನಿಧನ: ಸೆ.11ರಂದು ದೇಶಾದ್ಯಂತ ಒಂದು ದಿನ ಶೋಕಾಚರಣೆ
ಮುಂದಿನ ಲೇಖನರಾಣಿ 2ನೇ ಎಲಿಜಬೆತ್ ನಿಧನ: ಹಳೆಯ ವಿಡಿಯೋ ಹಂಚಿಕೊಂಡು ಸಂತಾಪ ಸೂಚಿಸಿದ ಯದುವೀರ್ ಒಡೆಯರ್