ಮುಂಬೈ(Mumbai): ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಮಾಣಿಕ್ರಾವ್ ಗವಿತ್ ಅವರು ನಾಸಿಕ್ನ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿದ್ದಾರೆ.
ಅವರಿಗೆ 87 ವರ್ಷ ವಯಸ್ಸಾಗಿತ್ತು.
ಗವಿತ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ (2004 ರಲ್ಲಿ) ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವರಾಗಿ ಮತ್ತು 2013ರಲ್ಲಿ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಬುಡಕಟ್ಟು ಸಮುದಾಯ ಪ್ರಾಬಲ್ಯವಿರುವ ನಂದೂರ್ಬರ್ ಕ್ಷೇತ್ರದಿಂದ 1980–2009ರ ಅವಧಿಯಲ್ಲಿ 9 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಗವಿತ್, 2014ರ ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಅವರ ಮಗಳು ನಿರ್ಮಲಾ ಗವಿತ್, ಇಗಟ್ಪುರಿ ಕ್ಷೇತ್ರದಲ್ಲಿ 2009 ಹಾಗೂ 2014ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಆದರೆ, 2019ರಲ್ಲಿ ಶಿವಸೇನಾದಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು.
ಮಾಣಿಕ್ರಾವ್ ಪುತ್ರ ಭರತ್, 2019ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಟಿಕೆಟ್ ಸಿಗದ ಕಾರಣ ಬಿಜೆಪಿಗೆ ಸೇರಿದ್ದರು.
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
ಖ್ಯಾತ ಯೂಟ್ಯೂಬರ್ ಅಭ್ರಾದೀಪ್ ಸಹ ಇನ್ನಿಲ್ಲ..
ದುಬೈನಲ್ಲಿ ಧಾರಾಕಾರ ಮಳೆ
ಆನ್ಲೈನ್ನಲ್ಲಿ ರಾಮ್ ಲಲ್ಲಾ ತಿಲಕ ಸಮಾರಂಭವನ್ನು ವೀಕ್ಷಿಸಿದ ಪ್ರಧಾನಿ ಮೋದಿ
ದೇಶದಲ್ಲಿ ಸಂಚಲನ ಶುರುವಾಗುತ್ತಾ….?
ರಾಮ್ ಲಲ್ಲಾನ ಹಣೆ ಸ್ಪರ್ಶಿಸಿದ ಸೂರ್ಯರಶ್ಮಿ
ಆಪಲ್ ಬಳಕೆದಾರರಿಗೆ ಬಿಗ್ ಶಾಕ್…. !
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.