ನವದೆಹಲಿ(Newdelhi) : ಬಾಳಸಂಗಾತಿಯ ಆಯ್ಕೆ ಸ್ವಾತಂತ್ರವು ವೈಯಕ್ತಿಕ ಸ್ವಾತಂತ್ರ್ಯದ ಮೂಲಸಾರ. ಈ ವಿಷಯದಲ್ಲಿ ನಂಬಿಕೆಯ ಪ್ರಶ್ನೆಯು ಅಡ್ಡಿಯಾಗಬಾರದು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಸಂಗಾತಿ ಆಯ್ಕೆಗೆ ಸಂಬಂಧಿಸಿದಂತೆ ಕುಟುಂಬ ಸದಸ್ಯರು ಸೇರಿದಂತೆ ಕೆಲವರಿಂದ ದಂಪತಿಗೆ ರಕ್ಷಣೆ ನೀಡುವಂತಹ ಸೂಕ್ಷ್ಮ ವಿಷಯದಲ್ಲಿ ಪೊಲೀಸರು ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಪತ್ನಿಯ ಕುಟುಂಬದ ಸದಸ್ಯರು ನಮ್ಮನ್ನು ಅಪಹರಿಸಿದ್ದು, ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಕತ್ತಿಯಿಂದ ನನ್ನ ಗುಪ್ತಾಂಗಕ್ಕೆ ಹಾನಿ ಮಾಡಿದ್ದಾರೆ. ಹಲ್ಲೆಯಿಂದ ಇರಿತದ ಗಾಯಗಳಾಗಿವೆ ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೋರ್ಟ್ ಈ ರೀತಿ ಹೇಳಿದೆ.
ದಂಪತಿಯ ಸುರಕ್ಷತೆಗೆ ಒತ್ತು ನೀಡಲು ಹಾಗೂ ಭದ್ರತೆ ನೀಡುವಲ್ಲಿ ಪೊಲೀಸರು ಸೂಕ್ತವಾದ ಕ್ರಮಕೈಗೊಂಡಿಲ್ಲ ಎಂಬುದು ದುರದೃಷ್ಟಕರ. ಪೊಲೀಸರಿಂದ ಇಂಥ ಲೋಪವನ್ನು ಸಹಿಸಲಾಗದು. ಕರ್ತವ್ಯಲೋಪ ತೋರಿದವರ ವಿರುದ್ಧ ಕ್ರಮವಹಿಸಬೇಕು ಎಂದು ಕೋರ್ಟ್ ಹೇಳಿದೆ.
ಇಂಥ ಪ್ರಕರಣಗಳಲ್ಲಿ ದೂರುಗಳು ಬಂದಾಗ ಪೊಲೀಸರು, ಸಂಬಂಧಿಸಿದ ಅಧಿಕಾರಿಗಳು ಹೆಚ್ಚು ಸೂಕ್ಷ್ಮತೆ ವಹಿಸುವಂತೆ ಸಿಬ್ಬಂದಿಯನ್ನು ಸಜ್ಜುಗೊಳಿಸಬೇಕು ಎಂದೂ ಕೋರ್ಟ್, ದೆಹಲಿ ಪೊಲೀಸ್ ಕಮಿಷನರ್ ಅವರಿಗೆ ಸಲಹೆ ಮಾಡಿತು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.