ಮನೆ ರಾಜ್ಯ ಗಾಂಧಿ ಕುಟುಂಬ ಅಂದರೆ ಬಿಜೆಪಿಗೆ ಭಯ: ಡಿ.ಕೆ.ಶಿವಕುಮಾರ್

ಗಾಂಧಿ ಕುಟುಂಬ ಅಂದರೆ ಬಿಜೆಪಿಗೆ ಭಯ: ಡಿ.ಕೆ.ಶಿವಕುಮಾರ್

0

ಬೆಂಗಳೂರು(Bengaluru): ಬಿಜೆಪಿಯವರಿಗೆ ಗಾಂಧಿ ಕುಟುಂಬ ಅಂದರೆ ಭಯ. ಅದಕ್ಕಾಗಿಯೇ ಸುಳ್ಳು ಕೇಸ್ ಹಾಕಿ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಚಾರಣೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನಲ್ಲೂ ಕೈ ನಾಯಕರು, ಕಾರ್ಯಕರ್ತರು  ಧರಣಿ ನಡೆಸುತ್ತಿದ್ದಾರೆ.

ಈ ಸಂದರ್ಭ ಮಾಧ್ಯಮಗಳೊಂದಿಎ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದೆ. ರಾಹುಲ್ ಗಾಂಧಿಯನ್ನು 50 ಗಂಟೆಗಳ ಕಾಲ ವಿಚಾರಣೆ ಮಾಡಿದರು.  ಇಡಿ ವಿಚಾರಣೆ ನಡೆಸಿರುವ ವಿಡಿಯೋ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು.

ನಮ್ಮ ನಾಯಕರ ಮೇಲೆ ಸುಳ್ಳು ಕೇಸ್ ಹಾಕಿ ತನಿಖೆ ನಡೆಸುತ್ತಿರುವುದನ್ನು ಖಂಡಿಸಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂಧ್ರ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು.

ಹಿಂದಿನ ಲೇಖನರಾಜ್ಯಸಭೆ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ವೀರೇಂದ್ರ ಹೆಗ್ಗಡೆ
ಮುಂದಿನ ಲೇಖನವಿದ್ಯಾರ್ಥಿಗಳ ಕಿಸ್ಸಿಂಗ್ ಪಂದ್ಯ: ವಿಡಿಯೋ ವೈರಲ್ ಮಾಡಿದ ಯುವಕನ ವಿಚಾರಣೆ