ಮನೆ ಸ್ಥಳೀಯ ಗಾಂಧಿ ಜಯಂತಿ ಪ್ರಾರ್ಥನಾ ಸಭೆ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರಿಂದ ಪುಷ್ಪಾರ್ಚನೆ

ಗಾಂಧಿ ಜಯಂತಿ ಪ್ರಾರ್ಥನಾ ಸಭೆ: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರಿಂದ ಪುಷ್ಪಾರ್ಚನೆ

0

ಮೈಸೂರು:  ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್.ಸಿ.ಮಹದೇವಪ್ಪ ಅವರು ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

Join Our Whatsapp Group

ಇಂದು ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದೊಂದಿಗೆ ಪುರಭವನದ ಶ್ರೀ ರಂಗಾಚಾರ್ಲು ಸ್ಮಾರಕ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಪ್ರಾರ್ಥನಾ ಸಭೆಯಲ್ಲಿ ಪುಷ್ಪಾರ್ಚನೆ ನೆರವೇರಿಸಿದರು.

ರಾಮಕೃಷ್ಣ ಆಶ್ರಮದ ಅಗರಾನಂದ ಸ್ವಾಮೀಜಿ ಅವರಿಂದ ಹಿಂದೂ ಧರ್ಮ ಪ್ರಾರ್ಥನೆ, ಸೆಂಟ್ ಫಿಲೋಮಿನಾ ಚರ್ಚ್ ನ ಫಾದರ್ ಪೀಟರ್ ಅವರಿಂದ ಕ್ರೈಸ್ತ ಧರ್ಮ ಪ್ರಾರ್ಥನೆ, ಅಬ್ದುಲ್ ಸಲಾಂ ಅವರಿಂದ ಇಸ್ಲಾಂ ಧರ್ಮದ ಪ್ರಾರ್ಥನೆ, ಜೈನ ಗುರು ಸುರೇಶ್ ಕುಮಾರ್ ಜೈನ್ ಅವರಿಂದ ಜೈನ ಧರ್ಮದ ಪ್ರಾರ್ಥನೆ, ಡಾ.ಕಲ್ಯಾಣ್ ಶ್ರೀ ಬಂತೇಜಿ ಅವರಿಂದ ಬೌದ್ಧ ಧರ್ಮದ ಪ್ರಾರ್ಥನೆ, ಸ್ಕುಕ್ವಿಂದರ್ ಸಿಂಗ್ ಅವರಿಂದ ಸಿಖ್ ಧರ್ಮೀಯ ಪ್ರಾರ್ಥನೆ ಮಾಡಲಾಯಿತು. ನಂತರ ಸ್ವಚ್ಚತಾ ಪ್ರತಿಜ್ಞಾ ವಿಧಿಯನ್ನು ಸ್ವೀಕಾರ ಮಾಡಲಾಯಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪಂಚ ಗ್ಯಾರೆಂಟಿ ಯೋಜನೆಗಳ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರ್‌ನಾಥ್, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ  ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಆಶಾದ್ ಉರ್ ರೆಹಮಾನ್ ಷರೀಫ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕರಾದ ಆಶೋಕ್ ಕುಮಾರ್ ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.