ಮನೆ ರಾಜ್ಯ ಅಂಬೇಡ್ಕರ್‌ ಅವರನ್ನು ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ: ದೂರು ದಾಖಲು

ಅಂಬೇಡ್ಕರ್‌ ಅವರನ್ನು ಹೋಲುವ ಗಣೇಶ ಮೂರ್ತಿ ಪ್ರತಿಷ್ಠಾಪನೆ: ದೂರು ದಾಖಲು

0

ಗಂಗಾವತಿ (Gangavati): ಡಾ. ಬಿ.ಆರ್‌. ಅಂಬೇಡ್ಕರ್ ಅವರನ್ನು ಹೋಲುವ ರೀತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಹಿನ್ನೆಲೆಯಲ್ಲಿ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪರಿಶಿಷ್ಟ ಸಂಘಟನೆಯ ಹೋರಾಟಗಾರ ಹುಲಿಗಪ್ಪ ಮಾಗಿ ಅವರು ವಿನಾಯಕ ಸ್ನೇಹವೃಂದ ಯುವಕ ಮಂಡಳಿ (ಮಾದಿಗ ಸಮಾಜ) ಅಂಬೇಡ್ಕರ್ ರೂಪದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಅವರಿಗೆ ಅಪಮಾನ ಮಾಡಿದೆ ಎಂದು ದೂರಿದ್ದಾರೆ.

ಗಣೇಶ ಮೂರ್ತಿ ಕಾಲಿನಿಂದ ಕುತ್ತಿಗೆ ತನಕ ಅಂಬೇಡ್ಕರ್ ರೂಪ ಹೊಂದಿದ್ದು, ರುಂಡ ಮಾತ್ರ ಗಣೇಶನದ್ದಾಗಿದೆ. ಯುವಕ ಮಂಡಳಿ ಸದಸ್ಯರು ಗಲಭೆ ಸೃಷ್ಟಿಸುವ ಉದ್ದೇಶದಿಂದಲೇ ಈ ರೀತಿಯ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ಕೂಡಲೇ ಗಣೇಶ ಯುವಕ ಮಂಡಳಿ ಸದಸ್ಯರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಹಿಂದಿನ ಲೇಖನಯಶಸ್ಸು ಸಾಧಿಸಲು ಪರಿಶ್ರಮವೊಂದೇ ಮಾರ್ಗ: ರಮೇಶ್
ಮುಂದಿನ ಲೇಖನಏಷ್ಯಾ ಕಪ್ ಟೂರ್ನಿಯಿಂದ ಹೊರಬಿದ್ದ ರವೀಂದ್ರ ಜಡೇಜಾ