ಮನೆ ಅಪರಾಧ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆ: ಪೊಲೀಸರಿಗೆ ದೂರು ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆ: ಪೊಲೀಸರಿಗೆ ದೂರು ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

0

ಬೆಂಗಳೂರು(Bengaluru): ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರ್.ಟಿ.ನಗರದ ಮಂಜುನಾಥ್ ಲೇಔಟ್​​ನ ಮುಖ್ಯ ರಸ್ತೆಯಲ್ಲಿರುವ ಮನೆ ಹಿಂಭಾಗದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳನ್ನು ಬೆಳೆಯಲಾಗಿದ್ದು, ಖುದ್ದು ಶಾಸಕರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯ ಹಿಂಭಾಗದಲ್ಲಿ ಬೆಳೆಯಲಾಗಿದ್ದ ಗಾಂಜಾ ಗಿಡಗಳನ್ನು ಗಮನಿಸಿದ ಶಾಸಕರು ಆರ್.ಟಿ.ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ನಿವೇಶನ ಮಾಲೀಕರಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ.

ಗೋಪಾಲಕೃಷ್ಣ ಬೇಳೂರು ಮಾತನಾಡಿ, ಕೇವಲ ಗ್ರಾಮೀಣ ಪ್ರದೇಶಗಳಲ್ಲಿ ಗಾಂಜಾ ಬೆಳೆಯುವುದು ಅಥವಾ ಮಾರಾಟ ಮಾಡುವ ಪ್ರಕರಣಗಳು ಗೊತ್ತಿತ್ತು. ಆದರೀಗ ರಾಜಧಾನಿ ಬೆಂಗಳೂರಿನಲ್ಲಿಯೇ ಗಾಂಜಾ ಬೆಳೆಯಲಾಗುತ್ತಿದೆ. ಪೊಲೀಸ್ ಇಲಾಖೆ ಇಲ್ಲಿ ಗಾಂಜಾ ಬೆಳೆಯುವವರಿಗೆ ಸಹಕಾರ ನೀಡುತ್ತಿರುವ ಲಕ್ಷಣಗಳು ಕಂಡು ಬರುತ್ತಿವೆ ಎಂದು ಆರೋಪಿಸಿದರು.

ಹಿಂದಿನ ಲೇಖನಜಲಸಂಪನ್ಮೂಲ ಇಲಾಖೆಯಲ್ಲಿ ಎಸ್​ಡಿಎ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಗುರು ಪೂರ್ಣಿಮೆಯ ಶುಭಾಶಯಗಳು