ಮನೆ ರಾಜ್ಯ ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರ ಬನ್ನಿ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸಲಹೆ

ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರ ಬನ್ನಿ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸಲಹೆ

0

ಬೆಂಗಳೂರು(Bengaluru): ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು. ನಾವು ಹೇಳಿ ಬರುವಂಥದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ  ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್‌ನಲ್ಲಿ ‘ಹರ್‌ ಘರ್‌ ತಿರಂಗ’ ಅಭಿಯಾನವನ್ನು ಹಿಂದಿಯಲ್ಲಿ ಉಲ್ಲೇಖಿಸಿದ್ದರ ವಿರುದ್ಧ ಸಿದ್ದರಾಮಯ್ಯ ಅವರು ಶುಕ್ರವಾರ ಸರಣಿ ಟ್ವೀಟ್‌ ಮಾಡಿ ಟೀಕಿಸಿದ್ದರು.

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್‌ ಕುಮಾರ್‌ ಅವರು ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದರು.

ಈ ಮಧ್ಯೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತನ್ನ ವೆಬ್‌ಸೈಟ್‌ನಲ್ಲಿದ್ದ ಹಿಂದಿ ಉಲ್ಲೇಖವನ್ನು ತೆಗೆದಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದ್ದಾರೆ.

ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ. ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂಥದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ಸಲಹೆ ನೀಡಿದ್ದಾರೆ.

ಹಿಂದಿನ ಲೇಖನದುರುದ್ದೇಶಿತ ದೂರುಗಳು ಬಂದಾಗ ನ್ಯಾಯಾಂಗದ ಅಧಿಕಾರಿಗಳು ಮಂಪರು ಪರೀಕ್ಷೆಗೆ ಮುಂದಾಗಬೇಕು: ನ್ಯಾ. ಕೃಷ್ಣ ಭಟ್‌
ಮುಂದಿನ ಲೇಖನಕರ್ತವ್ಯ ನಿರತ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಜಗನ್ನಾಥ್ ಹೃದಯಾಘಾತದಿಂದ ನಿಧನ