ಮನೆ ರಾಜ್ಯ ವಿಜಯಪುರ ಅರಣ್ಯ ಭೂಮಿಗೆ ಜಿಐ ಟ್ಯಾಗ್​: ಸಿದ್ದೇಶ್ವರ ಶ್ರೀಗಳ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ...

ವಿಜಯಪುರ ಅರಣ್ಯ ಭೂಮಿಗೆ ಜಿಐ ಟ್ಯಾಗ್​: ಸಿದ್ದೇಶ್ವರ ಶ್ರೀಗಳ ಹೆಸರು ನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧಾರ

0

ವಿಜಯಪುರ: ಮಮದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ 1.494.38 ಎಕರೆ ಮೀಸಲು ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ  ಪಾರಂಪರಿಕ ಜೀವವೈವಿಧ್ಯ ತಾಣ ಎಂದು ಮರು ನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Join Our Whatsapp Group

ಜನವರಿ 2 ಸಿದ್ದೇಶ್ವರ ಸ್ವಾಮೀಜಿ ಅವರ ಪಯಣ್ಯತಿಥಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಸಿದ್ದೇಶ್ವರ ಸ್ವಾಮೀಜಿಯವರ ಜೀವನ ಮತ್ತು ಕೊಡುಗೆಗಳನ್ನು ಜನರಿಗೆ ತಿಳಿಸಲು ವಿಜ್ಞಾನ ಕೇಂದ್ರ ಮತ್ತು ವಸ್ತುಸಂಗ್ರಹಾಲಯವನ್ನು ಸಹ ಸ್ಥಾಪಿಸಲಾಗುವುದು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶೇ.5ರಷ್ಟು ಅರಣ್ಯ ಪ್ರದೇಶವಿದ್ದು, ವಿಜಯಪುರದಲ್ಲಿ ಶೇ.1ಕ್ಕಿಂತ ಕಡಿಮೆ ಇದೆ. ಪಾರಂಪರಿಕ ತಾಣ ಎಂದು ಘೋಷಣೆ ನಂತರ ಅರಣ್ಯ ಸಂರಕ್ಷಣೆಗೆ ಉತ್ತೇಜಿಸದಂತಾಗುತ್ತದೆ ಎಂದು ಸಚಿವರು ಹೇಳಿದರು.

ಅರಣ್ಯ ಭೂಮಿಯನ್ನು ಪಾರಂಪರಿಕ ತಾಣವೆಂದು ಘೋಷಿಸುವುದರಿಂದ ಸಸ್ಯ ಮತ್ತು ಪ್ರಾಣಿ ಸಂಕುಲದ ರಕ್ಷಣೆಗೆ ಹೆಚ್ಚಿನ ಗಮನ ಕೊಡಬಹುದು. ವಿಜಯಪುರದಲ್ಲಿ ಅರಣ್ಯ ಇಲಾಖೆಗೆ ಒಳಪಡುವ ಒಟ್ಟು ಜಮೀನು 2 ಸಾವಿರ ಹೆಕ್ಟೇರ್ ಭೂಮಿ ಇದೆ. ಈ ಪಾರಂಪರಿಕ ತಾಣದಲ್ಲಿ ಎರಡು ಕೆರೆಗಳಿದ್ದು, ಇವು ಸಣ್ಣ ನೀರಾವರಿ ಇಲಾಖೆಯ ಅಧೀನದಲ್ಲಿವೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದರು.

ಸಾಮಾನ್ಯವಾಗಿ ಪಾರಂಪರಿಕ ತಾಣಗಳು ಮತ್ತು ಸಂರಕ್ಷಣಾ ಮೀಸಲು ಪ್ರದೇಶಗಳೆಂದು ಬೆಂಗಳೂರು ಸುತ್ತಮುತ್ತ ಅಥವಾ ಪಶ್ಚಿಮ ಘಟ್ಟ ಪ್ರದೇಶಗಳು ಎಂದು ಘೋಷಿಸಲಾಗುತ್ತದೆ. ಯಾವಾಗಲೂ ಬಯಲು ಸೀಮೆಯ ಪ್ರದೇಶಗಳಿಗೆ ಇಂತಹ ಟ್ಯಾಗ್ ಸಿಗುವುದಿಲ್ಲ ಎಂದರು.