ಮನೆ ಸುದ್ದಿ ಜಾಲ ಜಂತು ಹುಳು ನಿವಾರಣಾ ಮಾತ್ರೆಗಳನ್ನು ಎಲ್ಲಾ ಮಕ್ಕಳಿಗೂ ನೀಡಿ: ಗಾಯತ್ರಿ

ಜಂತು ಹುಳು ನಿವಾರಣಾ ಮಾತ್ರೆಗಳನ್ನು ಎಲ್ಲಾ ಮಕ್ಕಳಿಗೂ ನೀಡಿ: ಗಾಯತ್ರಿ

0

ಮೈಸೂರು: ಮಕ್ಕಳ ಅಪೌಷ್ಠಿಕತೆ, ರಕ್ತಹೀನತೆ ಹೋಗಲಾಡಿಸುವ ಹಾಗೂ ಜಂತು ಹುಳು ಬಾಧೆಯನ್ನು ನಿವಾರಣೆ ಮಾಡುವ ಜಂತು ನಿವಾರಣಾ ಮಾತ್ರೆಗಳನ್ನು ಎಲ್ಲಾ ಅರ್ಹ ಮಕ್ಕಳಿಗೆ ನೀಡಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗಾಯತ್ರಿ ಅವರು ತಿಳಿಸಿದರು.

 ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ, ದಡಾರ ಮತ್ತು ರೂಬೆಲ್ಲಾ, ಪ್ಲೋರಸಿಸ್ ಹಾಗೂ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 1 ರಿಂದ 19 ವರ್ಷ ವಯಸ್ಸಿನ ಎಲ್ಲಾ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಯನ್ನು ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ. ಜಂತು ಹುಳು ಬಾಧೆಯಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಜಿಲ್ಲೆಯಲ್ಲಿ ಪೌಷ್ಠಿಕತೆಯನ್ನು ಹೆಚ್ಚಿಸುವ ಆರೋಗ್ಯ ಕ್ರಮಗಳನ್ನು ಕೈಗೊಳ್ಳಿ. ತಾಯಿ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಲು ಅಗತ್ಯ ಚಿಕಿತ್ಸೆಗಳನ್ನು ನೀಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆರೋಗ್ಯ ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡಬೇಕು. ದಡಾರ ಮತ್ತು ರುಬೆಲ್ಲಾ ಚಿಕಿತ್ಸೆಯನ್ನು ಶೇ. 100 ರಷ್ಟು ಪರಿಣಾಮಕಾರಿಯಾಗಿ ನೀಡಿ ದಡಾರ ಮತ್ತು ರುಬೆಲ್ಲಾ ಸಂಖ್ಯೆಯನ್ನು ಶೂನ್ಯಕ್ಕೆ ತರಬೇಕು ಎಂದು ಸೂಚನೆ ನೀಡಿದರು.

ಪ್ಲೊರಸಿಸ್‌ನಿಂದ ಮಾನವನ ಹಲ್ಲುಗಳು ಹಾಗೂ ಮೂಳೆಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಫ್ಲೋರೈಡ್ ಹೆಚ್ಚಾಗಿರುವ ಕುಡಿಯುವ ನೀರು ಮತ್ತು ಫ್ಲೋರೈಡ್ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪ್ಲೋರಾಸಿಸ್ ಬರುತ್ತದೆ. ಇದು ಟ್ರೈಬಲ್  ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸುತ್ತದೆ ಕಾರಣ ಬೋರ್ವೆಲ್ ನೀರು ನೇರವಾಗಿ ಬಳಕೆ. ಮಾಡುವುದು. ಮೈಸೂರು ನಗರದಲ್ಲಿ ಕಾವೇರಿ ನೀರು ಇದೆ. ಆದರೂ ಇಲ್ಲಿ ಪ್ಲೋರಸಿಸ್ ಇರುವುದು ಆಶ್ಚರ್ಯ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯಾಧಿಕಾರಿಗಳು ಪ್ಲೋರಸಿಸ್ ಇರುವುದು ಪಿರಿಯಾಪಟ್ಟಣ, ನಂಜನಗೂಡು, ಟಿ ನರಸೀಪುರ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕೆಲವರು ನೇರವಾಗಿ ಬೋರ್ವೆಲ್ ನೀರನ್ನು ಕುಡಿಯಲು ಬಳಸುತ್ತಿದ್ದಾರೆ. ಇದರಿಂದ ಪ್ಲೋರಸಿಸ್ ಕಂಡುಬರುತ್ತಿದೆ ಅಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಪ್ರಸಾದ್ ಅವರು ಮಾತನಾಡಿ 10 ಲಕ್ಷ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲೆಯ ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮಾರ್ಚ್ 13 ರಿಂದ ಮಾರ್ಚ್ 25 ರವರಿಗೆ ನೀಡಲಾಗುತ್ತದೆ ಎಂದರು.

ಜಿಲ್ಲಾ ಆರ್.ಸಿ. ಹೆಚ್ ಅಧಿಕಾರಿಗಳಾದ ಮಾತನಾಡಿ ಎರಡನೇ ಸುತ್ತಿನ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಆಚರಣೆ ಮಾಡಲಾಗುತ್ತಿದೆ. ಜಂತು ಹುಳುಗಳಿಂದ ಅಪೌಷ್ಠಿಕತೆ ಉಂಟಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನರಾಜ್ಯದಲ್ಲಿ 5 ಮತ್ತು 8 ನೇ ತರಗತಿಯ ‘ಪಬ್ಲಿಕ್ ಪರೀಕ್ಷೆ’ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಮುಂದಿನ ಲೇಖನಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಿಸೋಡಿಯಾ ಮಾ. 17ರವರೆಗೆ ಇ ಡಿ ವಶಕ್ಕೆ