ಮನೆ ರಾಜ್ಯ ಮಂಡ್ಯ ಬಂದ್’ಗೆ ಉತ್ತಮ ಪ್ರತಿಕ್ರಿಯೆ

ಮಂಡ್ಯ ಬಂದ್’ಗೆ ಉತ್ತಮ ಪ್ರತಿಕ್ರಿಯೆ

0

ಮಂಡ್ಯ(Mandya): ಕಬ್ಬು, ಇತರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ಸೋಮವಾರ ರೈತಸಂಘದ ಸದಸ್ಯರು ಕರೆ ನೀಡಿರುವ ಮಂಡ್ಯ ಬಂದ್’ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳ್ಳಂಬೆಳಿಗ್ಗೆ ರಸ್ತಗಿಳಿದ ರೈತರು ಕೆಲಕಾಲ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದರು. ನಗರದ ವಿವಿಧೆಡೆ ಬೈಕ್ ರ್ಯಾಲಿ ನಡೆಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು.

ಕೆಲ ವರ್ತಕರು ಸ್ವಯಂಪ್ರೇರಿತವಾಗಿ ಅಂಗಡಿ ಮುಚ್ಚಿದ್ದರು. ಬೆಳಿಗ್ಗೆ‌ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಬಂದ್ ಗೆ ಕರೆ ನೀಡಲಾಗಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ನಗರದ ಸರ್ ಎಂ.ವಿ ಪ್ರತಿಮೆ ಎದುರು ರೈತಸಂಘ ತಿಂಗಳಿಂದ ಅನಿರ್ದಿಷ್ಟವಧಿ ಧರಣಿ ನಡೆಸುತ್ತಿದೆ. ನಿರಂತರ ಹೋರಾಟಕ್ಕೆ ಸರ್ಕಾರ ಸ್ಪಂದನೆ ನೀಡದ ಕಾರಣ ನಡೆಸಲಾಗುತ್ತಿದೆ.

ಹಿಂದಿನ ಲೇಖನಬಾಂಬೆ ಹೈಕೋರ್ಟ್’ನ ನಿರ್ಭೀತ ನಿಲುವಿನಿಂದಾಗಿ ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವ ಉಳಿಯಿತು: ಸಿಜೆಐ
ಮುಂದಿನ ಲೇಖನತುಳಸಿ ಚಹಾ ಕುಡಿಯುವುದರಿಂದ ಸಾಕಷ್ಟು ಪ್ರಯೋಜನ