ಗುಂಡ್ಲುಪೇಟೆ (ಚಾಮರಾಜನಗರ): ಬಡತನಕ್ಕೆ ಜಾತಿ, ಕುಲ, ಪಕ್ಷ ಎಂಬುದಿಲ್ಲ. ಅರ್ಹ ಬಡವರಿಗೆಲ್ಲರಿಗೂ ನಿವೇಶನ ಹಂಚಿಕೆ ಮಾಡಲು ಸರ್ಕಾರ ಮುಂದಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
ವಸತಿ ಇಲಾಖೆಯ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ಗುಂಡ್ಲುಪೇಟೆ ಪುರಸಭೆ ಶನಿವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ನಿವೇಶನ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುಂಡ್ಲುಪೇಟೆಯಲ್ಲಿ 30 ವರ್ಷಗಳಿಂದ ಯಾರಿಗೂ ನಿವೇಶನ ಹಂಚಿಕೆ ಮಾಡಿರಲಿಲ್ಲ. ಬಡತನ ಆ ಜನ್ಮ ಹಕ್ಕಲ್ಲ. ಅವರು ಕೂಡ ಮುಖ್ಯವಾಹಿನಿಗೆ ಬರಬೇಕು ಎಂದರು.
ಬಿಜೆಪಿಗೆ ಓಟು ಹಾಕುತ್ತಲೇ ಇರಿ. ನಾವು ವರ್ಷ ವರ್ಷವೂ ನಿಮಗೆ ನಿವೇಶನ ಹಂಚಿಕೆ ಮಾಡುತ್ತೇವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಒಂದು ಲಕ್ಷ ಮನೆ ನಿರ್ಮಿಸಲು ಪ್ರಧಾನಿ ಮೋದಿಯವರು ₹600 ಕೋಟಿ ಕೊಟ್ಟಿದ್ದರು. ಆದರೆ, ಅಂದಿನ ಸರ್ಕಾರ ಅದಕ್ಕೆ ಬೇಕಾದ ಜಾಗವನ್ನು ಹುಡುಕಲಿಲ್ಲ. ನಾನು ಸಚಿವನಾದ ಮೇಲೆ ಜಾಗ ಹುಡುಕಿ ಬೆಂಗಳೂರಿನಲ್ಲಿ 52 ಸಾವಿರ ಮನೆ ನಿರ್ಮಾಣ ಮಾಡಲಾಗಿದೆ. ಈಗಾಗಲೇ 5000 ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡಿದ್ದೇವೆ ಎಂದು ಹೇಳಿದರು.
ಯಡಿಯೂರಪ್ಪ ಅವರು ವಿಧಾನಸಭೆ, ಚುನಾವಣಾ ರಾಜಕೀಯಕ್ಕೆ ವಿದಾಯ ಹೇಳಿರುವ ಬಗ್ಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಸೋಮಣ್ಣ, ಎಲ್ಲರೂ ಒಂದು ದಿನ ವಿದಾಯ ಹೇಳಲೇಬೇಕಲ್ಲವೇ? ವಯಸ್ಸಾದ ನಂತರ ಹೋಗಲೇಬೇಕಲ್ಲವೇ? ದೇಶದಲ್ಲಿ ಬಹುತೇಕ ಮಂದಿ ಈ ರೀತಿ ಬಂದು ಹೋಗಿದ್ದಾರೆ. ನಾನೂ ಮುಂದೊಂದಿನ ವಿದಾಯ ಹೇಳಲೇಬೇಕು. ಯಡಿಯೂರಪ್ಪ ತಮ್ಮ ವಯಸ್ಸಿನ ಇತಿಮಿತಿ ಅರ್ಥಮಾಡಿಕೊಂಡು ತೀರ್ಮಾನ ಮಾಡಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದು ಒಳ್ಳೆಯದು ಅನಿಸಿರಬೇಕು, ಹಾಗಾಗಿ ವಿದಾಯ ಹೇಳಿದ್ದಾರೆ ಎಂದರು.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.