ಮನೆ ಸ್ಥಳೀಯ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

0

ಕಳೆದ ವರ್ಷ ಕೊರೋನಾ-ಬರಗಾಲ ಕಾರಣಕ್ಕೆ ಹೆಚ್ಚು ವಿಜೃಂಭಣೆ ಮಾಡಲಿಲ್ಲ, ಈ ಬಾರಿ ವಿಜೃಂಭಣೆ ಇರಲಿ

ಬೆಂಗಳೂರು: ಅದ್ಧೂರಿ ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಅಲ್ಲದೇ ಅಕ್ಟೋಬರ್.೧೨ರಂದು ದಸರಾ ಜಂಬೂ ಸವಾರಿ ನಡೆಸೋದಕ್ಕೂ ಮುಹೂರ್ತ ಫಿಕ್ಸ್ ಮಾಡಲಾಗಿದೆ.

Join Our Whatsapp Group

ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಉನ್ನತ ಮಟ್ಟದ ಸಮಿತಿಯ ಸಭೆಯ ನಂತ್ರ ಮಾತನಾಡಿದಂತ ಅವರು, ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧಿಯ ಹಿನ್ನಲೆಯಲ್ಲಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದರು.

ಅಕ್ಟೋಬರ್ ೩ ರಿಂದ ೧೨ ರವರೆಗೆ ನಡೆಯಲಿರುವ ದಸರಾ ನಡೆಯಲಿದೆ. ಅಕ್ಟೋಬರ್ ೩ ರ ಬೆಳಿಗ್ಗೆ ೯ ಗಂಟೆ ೧೦ ನಿಮಿಷಕ್ಕೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮತ್ತು ದಸರಾ ಉದ್ಘಾಟನೆ ಮಾಡಲಾಗುತ್ತದೆ. ಅಕ್ಟೋಬರ್ ೧೨ ರ ಮಧ್ಯಾಹ್ನ ೧೨ ಗಂಟೆ ೧೦ ನಿಮಿಷಕ್ಕೆ ಜಂಬೂ ಸವಾರಿ ಆರಂಭಗೊಳ್ಳಲಿದೆ ಎಂದರು.

ಕಳೆದ ವರ್ಷ ದಸರೆಗೆ ೩೦ ಕೋಟಿ ಖರ್ಚಾಗಿತ್ತು.ಈ ಸಲ ಇನ್ನಷ್ಟು ಹೆಚ್ಚು ಹಣ ಒದಗಿಸುವ ಇಂಗಿತ ವ್ಯಕ್ತ ಪಡಿಸಲಾಗಿತ್ತು ಎಂದರು. ಈ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಸಭೆಯಲ್ಲಿ ಸಿಎಂ ನೀಡಿದ ಇತರೆ ಸೂಚನೆಗಳು..

  • ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ.
  • ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು
  • ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು.
  • ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು.
  • ಟ್ಯಾಬ್ಲೋಗಳಲ್ಲಿ ಹೊಸತನ ಇರಲಿ.
  • ದೀಪಾಲಂಕಾರ ಈ ಬಾರಿ 21 ದಿನ ಇರಲಿ.
  • ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ.
  • ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಿ.
  • ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು.
  • ಕರ್ನಾಟಕ ಸಂಭ್ರಮ 50 ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಿ.
  • ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿ ಸಭೆ ನಿರ್ಧರಿಸಿತು.
  • ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ನಡೆಸಲೂ ವಿನಂತಿಸಲಾಗುವುದು.
  • ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು.
  • ಮಾಮೂಲು ಹಳೆ ಪದ್ಧತಿಗಳಲ್ಲೇ ಮಾಡುವುದಕ್ಕಿಂತ upgrade (ಉನ್ನತೀಕರಿಸಿ) ಮಾಡಿ.