ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆಯೇ ಸುಪ್ರೀಂ ಕೋರ್ಟ್ನಲ್ಲಿ ಗುರುವಾರ ಮತ್ತೊಮ್ಮೆ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ, NEET-UG 2024 ರ 1,563 ಅಭ್ಯರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಅಂತಹ ಅಭ್ಯರ್ಥಿಗಳಿಗೆ ಜೂನ್ 23 ರಂದು ಮರು ಪರೀಕ್ಷೆಗೆ ಹಾಜರಾಗುವ ಆಯ್ಕೆಯನ್ನು ನೀಡಿದೆ. ಜುಲೈ 6 ರಂದು ನಡೆಯಲಿರುವ ಕೌನ್ಸೆಲಿಂಗ್ ಅನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳ ವಿಚಾರಣೆ ಇಂದು ನಡೆದಿದೆ. ನೀಟ್ ಪರೀಕ್ಷೆ ನಡೆಸುವ ಸಂಸ್ಥೆಯಾಗಿರುವ ಎನ್ಟಿಎ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನೀಡಿದ ಗ್ರೇಸ್ ಮಾರ್ಕ್ಗಳ ಕುರಿತು ಇಂದು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡನೆ ನಡೆಯಿತು.
ಪರೀಕ್ಷೆಯ ರದ್ದತಿ ಹಾಗೂ ಮರು ಪರೀಕ್ಷೆ ಕುರಿತು ಸುಪ್ರೀಂ ವಿಚಾರಣೆ ನಡೆಸಿದ್ದು ಅಂತಿಮವಾಗಿ ಎನ್ಟಿಎ ನೀಡಿರುವ ಗ್ರೇಸ್ ಅಂಕಗಳನ್ನು ರದ್ದುಗೊಳಿಸಿ, ಜೂನ್ 23ಕ್ಕೆ ಮರುಪರೀಕ್ಷೆ ನಿರ್ಧಾರ ಕೈಗೊಳ್ಳಲಾಯಿತು.
ಫಿಸಿಕ್ಸ್ ವಾಲಾ ಸಿಇಒ ಅಲಖ್ ಪಾಂಡೆ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಗ್ರೇಸ್ ಅಂಕಗಳನ್ನು ನೀಡುವ ಎನ್ಟಿಎ ನಿರ್ಧಾರ ತಪ್ಪು ಎಂದು ಹೇಳಿದ್ದರು.
ಸುಪ್ರೀಂಕೋರ್ಟ್ ಎನ್ಟಿಎಗೆ ನೋಟಿಸ್ ಜಾರಿ ಮಾಡಿತ್ತು. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್ಟಿಎ)ಗೆ ನೋಟಿಸ್ ನೀಡಿತ್ತು.
ನ್ಯಾಯಮೂರ್ತಿ ವಿಕ್ರಮ್ ನಾಥ್ ಹಾಗೂ ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು ಜುಲೈ 8 ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳ ಪಟ್ಟಿ ಮಾಡಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಪ್ರಶ್ನಿಸಲಾಗಿದೆ ಅದಕ್ಕೆ ನಮಗೆ ಉತ್ತರಗಳು ಬೇಕು ಎಂದು ಹೇಳಿದರು.
2024ನೇ ಸಾಲಿನ ನೀಟ್-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಗೆ ಮೊರೆ ಹೋಗಿದ್ದರು.
2024ನೇ ಸಾಲಿನ ನೀಟ್ ಪರೀಕ್ಷೆಯು ಕಳೆದ ತಿಂಗಳ 5 ರಂದು ನಡೆದಿತ್ತು, ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಹಾಗೂ ಇತರೆ ಕೋರ್ಸ್ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸಿತ್ತು.
ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ….
ಇಂಡಿಯನ್ ಬ್ಯಾಂಕ್ ನೇಮಕಾತಿ 2024
ಶ್ರೀ ರಾಘವೇಂದ್ರ ಸ್ವಾಮೀಜಿಗಳ ಪಟ್ಟಾಭಿಷೇಕ ನಡೆದ ಸ್ಥಳ
ಸೈನಾ ಜೊತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬ್ಯಾಡ್ಮಿಂಟನ್
ಚಾಮುಂಡೇಶ್ವರಿ ತಾಯಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದೆ
ಚಿತ್ರತಂಡದ ನಿರ್ಮಾಪಕರು ಮಂಜೇಗೌಡ ರವರ ಹುಟ್ಟುಹಬ್ಬ
ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿ ಹುಟ್ಟು ಹಬ್ಬ ಆಚರಣೆ
2024 29ರ ಜಿಲ್ಲಾ ಘಟಕದ ಚುನಾವಣೆ ಇದೇ ತಿಂಗಳ 21 ಭಾನುವಾರ ನಡೆಯಲಿದೆ
ಹಿನಕಲ್ ಬಸವರಾಜು ನೇತೃತ್ವದ ತಂಡದಿಂದ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮತ ಪ್ರಚಾರಕ್ಕೆ ಚಾಲನೆ ನೀಡಲಾಯಿತು.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.