ಮನೆ ರಾಜ್ಯ ಗುಂಡ್ಲುಪೇಟೆ: ಕಾರು – ಲಾರಿ ನಡುವೆ ಅಪಘಾತ, ಮಹಿಳೆ ಸಾವು

ಗುಂಡ್ಲುಪೇಟೆ: ಕಾರು – ಲಾರಿ ನಡುವೆ ಅಪಘಾತ, ಮಹಿಳೆ ಸಾವು

0

ಚಾಮರಾಜನಗರ(Chamarajanagar): ಕಾರು ಹಾಗೂ ಲಾರಿ ನಡುವೆ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಹೊರ ವಲಯದ ಸೆಲ್ ಪೆಟ್ರೋಲ್ ಬಂಕ್ ಬಳಿ ಶುಕ್ರವಾರ ನಡೆದಿದೆ.

ನಂಜನಗೂಡು ತಾಲೂಕಿನ ಸಿದ್ದನಯ್ಯನಹುಂಡಿ ಗ್ರಾಮದ ಸಂಮೃದ್ದಿ(22) ಮೃತ ಮಹಿಳೆಯಾಗಿದ್ದು, ಈಕೆಯ ಪತಿ ಬೆಂಗಳೂರು ಮೂಲದ ನಾಗೇಂದ್ರ(30) ಸ್ಥಿತಿ ಚಿಂತಾಜನಕವಾಗಿದೆ.

ಗಾಯಾಳು ನಾಗೇಂದ್ರ ಅವರನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಊಟಿ ಪ್ರವಾಸ ಮುಗಿಸಿ ಮೈಸೂರು ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ.

ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಮಹಿಳೆಯ ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಅಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆ ಸಂಬಂಧಿಸಿದಂತೆ ಪೊಲೀಸರು ತಮಿಳುನಾಡು ಮೂಲದ ಲಾರಿ ಹಾಗೂ ಚಾಲಕ ಕಬೀರ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಹಿಂದಿನ ಲೇಖನಜಾವಗಲ್’ನ ಸುಂದರ ಶ್ರೀಲಕ್ಷ್ಮೀನರಸಿಂಹ ದೇವಾಲಯ
ಮುಂದಿನ ಲೇಖನವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಆರೋಪಿಯ ವಿರೋಧದ ನಡುವೆ ವಿಚಾರಣೆ ಮುಂದೂಡಿದ ದೆಹಲಿ ನ್ಯಾಯಾಲಯ