ಗುಂಡ್ಲುಪೇಟೆ(ಚಾಮರಾಜನಗರ): ನೇಣು ಬಿಗಿದುಕೊಂಡು ಖಾಸಗಿ ಫೈನಾನ್ಸ್ ಸಿಬ್ಬಂದಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ನಾಗಣಾಪುರ ಗ್ರಾಮದ ಅಭಿಷೇಕ್(23) ಮೃತ ಯುವಕ. ಈತ ಖಾಸಗಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ಯಾರು ಇಲ್ಲದ ವೇಳೆ ರಾತ್ರಿ ಕಚೇರಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ನಂತರ ಮಾಹಿತಿ ಅರಿತ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಮೃತದೇಹವನ್ನು ವಶಕ್ಕೆ ಪಡೆದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube