ಮನೆ ಸ್ಥಳೀಯ ಹೆಚ್.ಡಿ. ಕುಮಾರಸ್ವಾಮಿ ಹಿಟ್ ಅಂಡ್ ರನ್ ರೀತಿ ವರ್ತಿಸುತ್ತಿದ್ದಾರೆ: ಎಂ ಲಕ್ಷ್ಮಣ್

ಹೆಚ್.ಡಿ. ಕುಮಾರಸ್ವಾಮಿ ಹಿಟ್ ಅಂಡ್ ರನ್ ರೀತಿ ವರ್ತಿಸುತ್ತಿದ್ದಾರೆ: ಎಂ ಲಕ್ಷ್ಮಣ್

0

ಮೈಸೂರು: ಹೆಚ್.ಡಿ. ಕುಮಾರಸ್ವಾಮಿ ಹಿಟ್ ಅಂಡ್ ರನ್ ರೀತಿ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಇಡೀ ರಾಜ್ಯಕ್ಕೆ ಮಾಸ್ ಲೀಡರ್. ಅವರನ್ನು ಕುಮಾರಸ್ವಾಮಿ ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ತಿರುಗೇಟು ನೀಡಿದ್ದಾರೆ.

ಇಂದು ಸುದ್ದಿಗೋಷ್ಟಿಯಲ್ಲಿ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಎಂಟು ಮಂದಿಯ ಸಹಿಯನ್ನು ಒಬ್ಬರೇ ಮಾಡಿದ್ದಾರೆ. ಕೃಷಿ ನಿರ್ದೇಶಕರು, ಜಂಟಿ ನಿರ್ದೇಶಕರು ತಮಗೂ ಪತ್ರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಲುವರಾಯಸ್ವಾಮಿ ಒಕ್ಕಲಿಗ ಸಮುದಾಯದ ನಾಯಕ. ಐದು ಚುನಾವಣೆಯಲ್ಲಿ ಸೋತಿದ್ದರು. ಈ ಬಾರಿ ಗೆದ್ದು ಮಂತ್ರಿಯಾಗಿರುವುದನ್ನು ಕೆಲವರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಅಂಡ್ ಟೀಮ್ ಮಾತ್ರ ಒಕ್ಕಲಿಗ ಸಮುದಾಯದ ಮುಖಂಡರೇ? ಕುಮಾರಸ್ವಾಮಿ ಪೆನ್ ಡ್ರೈವ್ ಇಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ. ನನ್ನ ಬಳಿಯೂ ಪೆನ್ ಡ್ರೈವ್ ಇದೆ. 18 ನಿಮಿಷದ 6 ಎಪಿಸೋಡ್ ನ ಪೆನ್ ಡ್ರೈವ್ ನನ್ನ ಬಳಿಯಿದೆ. ಪೆನ್ ಡ್ರೈವ್ ನಲ್ಲಿರುವ ಮಾಹಿತಿಯನ್ನು ಕುಮಾರಸ್ವಾಮಿ ಬಹಿರಂಗ ಪಡಿಸಲಿ. ಅದಾದ ಒಂದು ಗಂಟೆಯೊಳಗೆ ನನ್ನ ಬಳಿಯಿರುವ ಪೆನ್ ಡ್ರೈವ್ ಮಾಹಿತಿ ಬಹಿರಂಗ ಪಡಿಸುತ್ತೇನೆ.

ಕುಮಾರಸ್ವಾಮಿ ಪದೇ ಪದೇ ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಉದ್ದೇಶವೇನು ? ಯಾವ ಕಾರಣಕ್ಕೆ ಹೋಗ್ತಿದ್ದಾರೆಂದು ಸ್ಪಷ್ಟಪಡಿಸಲಿ. ವಿದೇಶದಲ್ಲಿ ಹಣ ಹೂಡಿಕೆಗೆ  ಹೋಗ್ತೀದೀರಾ ಅಥವಾ ಬೇರೆ ಯಾವ ಕಾರಣಕ್ಕೆ ಹೋಗ್ತಿದೀರಿ ಎಂದು ಬಹಿರಂಗಪಡಿಸಿ? ಎಂದು ಪ್ರಶ್ನಿಸಿದರು.

ಮೂಗರ್ಜಿಗಳ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ. ಮೂಗರ್ಜಿಗಳ ಆಧಾರದ ಮೇಲೆ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸರ್ಕಾರಕ್ಕೆ ಹೇಳಿದ್ದಾರೆ. ಈ ಮೂಲಕ ರಾಜಭವನವನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಬಿಜೆಪಿಯವರು ಜನರಿಗೆ ತಪ್ಪು ಸಂದೇಶ ರವಾನೆ ಮಾಡ್ತಿದ್ದಾರೆ:  

ಎಸ್ ಸಿ., ಎಸ್ ಟಿ ಸಮುದಾಯಕ್ಕೆ ಮೀಸಲಿಟ್ಟ ಅನುದಾನ ಅನ್ಯ ಉದ್ದೇಶಗಳಿಗೆ ಬಳಕೆ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ಇದಕ್ಕೆ ಬಿಜೆಪಿಯೇ ಕಾರಣ. ಸಚಿವರಾಗಿದ್ದ ಗೋವಿಂದ ಕಾರಜೋಳ ಇದಕ್ಕೆ ಮುನ್ನುಡಿ ಬರೆದಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್ ಸಿ, ಎಸ್ ಟಿ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆ ರೀತಿ ಮಾಡಿಲ್ಲ. ಅನ್ಯ ಉದ್ದೇಶಕ್ಕೆ ಎಸ್ ಸಿ, ಎಸ್ ಟಿ ಅನುದಾನ ಬಳಕೆ ಮಾಡಿಕೊಂಡಿಲ್ಲ. ಆದರೆ ಬಿಜೆಪಿಯವರು ಜನರಿಗೆ ತಪ್ಪು ಸಂದೇಶ ರವಾನೆ ಮಾಡ್ತಿದ್ದಾರೆ  ಎಂದು ಆರೋಪಿಸಿದರು.

ಹಿಂದಿನ ಲೇಖನವಿವಾದದ ಬೆನ್ನಲ್ಲೇ ವಕೀಲರ ಸಮಾವೇಶದಿಂದ ಹಿಂದೆ ಸರಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌
ಮುಂದಿನ ಲೇಖನಸಿಎಂಗೆ ಶಾಸಕರು ಬರೆದ ಪತ್ರ ನಕಲಿ ಅಲ್ಲ ಅಸಲಿ: ಸಿ.ಟಿ ರವಿ