ಮನೆ ರಾಜಕೀಯ ಕುತೂಹಲಕ್ಕೆ ಕಾರಣವಾದ ಹೆಚ್.ವಿಶ್ವನಾಥ್ – ಸುರ್ಜೇವಾಲಾ ಭೇಟಿ

ಕುತೂಹಲಕ್ಕೆ ಕಾರಣವಾದ ಹೆಚ್.ವಿಶ್ವನಾಥ್ – ಸುರ್ಜೇವಾಲಾ ಭೇಟಿ

0

ಮೈಸೂರು(Mysuru): ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಸುಳಿವು ನೀಡಿರುವ ಎಚ್.ವಿಶ್ವಾನಾಥ್ , ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ರಣದೀಪ್ ಸಿಂಗ್ ಸುರ್ಜೇವಾಲರನ್ನು  ಭೇಟಿಯಾಗಿ ಮಾತು ಕತೆ ನಡೆಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.

ಸಿಎಂ ಬೊಮ್ಮಾಯಿ ಮತ್ತು ಸಚಿವರ ವಿರುದ್ಧ ಸರ್ಕಾರದ ವೈಫಲ್ಯಗಳ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದ ಹೆಚ್.ವಿಶ್ವನಾಥ್ ಇತ್ತೀಚೆಗೆ ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ. ಹಾಗೆಯೇ ನನ್ನ ರಕ್ತದಲ್ಲೇ ಕಾಂಗ್ರೆಸ್ ಇದೆ ಎಂದು ಸಹ ಹೇಳಿಕೆ ನೀಡಿದ್ದರು.

ಅಲ್ಲದೇ ಇತ್ತೀಚೆಗೆ ಸಿದ್ಧರಾಮಯ್ಯ , ಡಿಕೆ ಶಿವಕುಮಾರ್’ರನ್ನೂ ಭೇಟಿಯಾಗಿದ್ದರು.

ಹಿಂದಿನ ಲೇಖನಭಾರತಕ್ಕೆ ಬರುತ್ತಿದೆ ಕೋಕಾ-ಕೋಲಾ ಕಂಪನಿಯ ಹೊಸ ‘Cola phone’ ಸ್ಮಾರ್ಟ್’ಫೋನ್!
ಮುಂದಿನ ಲೇಖನಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾಧನೆ ಮರೆಯಲು ಸಾಧ್ಯವಿಲ್ಲ: ಸಚಿವ ಕೆ.ಗೋಪಾಲಯ್ಯ