ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಸಂವಿಧಾನ ಶಿಲ್ಪಿಗೆ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿದ್ದಾರೆ. ಈ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ. ಈ ಋಣ ಸಂದಾಯಕ್ಕೆ ನನ್ನ ರಾಜಕೀಯ ಮುಡಿಪು. ಮಹಾಗುರುವಿಗೆ ನಮನಗಳು ಎಂದು ಹೇಳಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಚಿಂತನೆಯ ಪ್ರತಿರೂಪವಾಗಿರುವ ಸಂವಿಧಾನಕ್ಕೆ ಎದುರಾಗಿರುವ ಬೆದರಿಕೆಯ ವಿರುದ್ಧ ಹೋರಾಡುವುದೇ ಸಂವಿಧಾನ ಶಿಲ್ಪಿಗೆ ನಾವು ಸಲ್ಲಿಸುವ ಅತ್ಯುನ್ನತ ಗೌರವ. ಈ ಹೋರಾಟಕ್ಕೆ ಬಾಬಾಸಾಹೇಬರ ಚಿಂತನೆಗಳು ನಮ್ಮ ಆಯುಧವಾಗಲಿ ಎಂದು ಹೇಳಿದ್ದಾರೆ.
ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ರಾಜಕೀಯ ಪ್ರಜಾಪ್ರಭುತ್ವ ಬಾಳಲಾರದು ಎಂಬ ಬಿ.ಆರ್.ಅಂಬೇಡ್ಕರರ ಎಚ್ಚರಿಕೆಯ ಸಂದೇಶವನ್ನು ನಾನು ಮಂಡಿಸಿರುವ ಹದಿಮೂರು ಬಜೆಟ್ ಗಳಲ್ಲಿ ಪಾಲಿಸಿದ್ದೇನೆ. ಇದು ನಾನು ಬಾಬಾ ಸಾಹೇಬರಿಗೆ ಸಲ್ಲಿಸಿದ ಗೌರವವೂ ಹೌದು ಎಂದು ತಿಳಿಸಿದ್ದಾರೆ.
ನಿರ್ಲಕ್ಷ್ಯ, ತುಚ್ಛೀಕರಣ, ದೈವೀಕರಣದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ದಮನಿಸಲು ಪ್ರಯತ್ನಿಸಿ ವಿಫಲರಾದ ಕೋಮುವಾದಿ ಶಕ್ತಿಗಳು ಈಗ ಬಾಬಾಸಾಹೇಬರನ್ನು ಆಪೋಶನ ತೆಗೆದುಕೊಂಡು ತಮ್ಮವರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ಹುನ್ನಾರದ ಬಗ್ಗೆ ನಾವು ಎಚ್ಚರವಾಗಿರಬೇಕು ಎಂದು ಕರೆ ನೀಡಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.