ಮೈಸೂರು: ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಮೈಸೂರಿನ ಕರ್ನಾಟಕ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ನಿವೃತ್ತ ಪ್ರಾಧ್ಯಾಪಕರೊಬ್ಬರು ಕೊಠಡಿಯಲ್ಲೇ ಧರಣಿಗೆ ಕುಳಿತಿರುವ ಘಟನೆ ವರದಿಯಾಗಿದೆ.
ನಿವೃತ್ತಿ ಪಿಂಚಣಿ ಕೊಡದ ಹಿನ್ನೆಲೆ ಕೆಎಸ್ ಒಯು ಕುಲಪತಿ ಶರಣಪ್ಪ ಹಲಸೆ ಅವರ ವಿರುದ್ಧ ಹಿರಿಯ ಲೇಖಕ, ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ರಂಗಸ್ವಾಮಿ ಕಿಡಿಕಾರಿದ್ದು, ನಿವೃತ್ತ ಪ್ರಾಧ್ಯಾಪಕ ರಂಗಸ್ವಾಮಿ ಅವರು ಕೊಠಡಿಯಲ್ಲೆ ಧರಣಿಗೆ ಕುಳಿತಿದ್ದಾರೆ ಎನ್ನಲಾಗಿದೆ.
ನಿವೃತ್ತಿ ಪಿಂಚಣಿ ಕೊಡಿ, ಇಲ್ಲಾ ಸಾಯಿಸಿ ಬಿಡ್ರಿ..! ನಿಮಗೆ ನಾಚಿಕೆ, ಮಾನ ಮರ್ಯಾದೆ ಇಲ್ವಾ? ನೀವು ಹೊಟ್ಟೆಗೆ ಏನ್ ತಿಂತೀರಾ ಹೇಳ್ರೀ.? ಎಂದು ಪ್ರಾಧ್ಯಾಪಕ ಪ್ರೊ. ಎ.ರಂಗಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಪ್ರಾಧ್ಯಾಪಕರಾಗಿದ್ದ ಪ್ರೊ. ಎ.ರಂಗಸ್ವಾಮಿ ಜುಲೈ 2022ರಲ್ಲಿ ನಿವೃತ್ತಿ ಹೊಂದಿದ್ದರು. ಪ್ರೊ. ಎ.ರಂಗಸ್ವಾಮಿ ಅವರು ಪರೀಕ್ಷಾಂಗ ಕುಲಸಚಿವರಾಗಿ ಎರಡು ಅವಧಿಗೆ ಕೆಲಸ ಮಾಡಿದ್ದರು. ಗಂಗೂಬಾಯಿ ಹಾನಗಲ್ ವಿವಿಗೆ ರಿಜಿಸ್ಟರ್ ಕೂಡ ಆಗಿದ್ದರು. ಜತೆಗೆ ಅರಕಲಗೂಡು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿದ್ದರು.
ರಂಗಸ್ವಾಮಿ ಅವರು ಕನ್ನಡ ಪುಸ್ತಕ ಮಾಲೆಯಲ್ಲಿ 50 ಕ್ಕೂ ಹೆಚ್ಚು ಪುಸ್ತಕ ಪ್ರಕಟಿಸಿದ್ದಾರೆ. ಆದರೆ ಪ್ರೊ.ಎ.ರಂಗಸ್ವಾಮಿ ಅವರಿಗೆ ನಿವೃತ್ತಿ ಪಿಂಚಣಿ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಕೆಎಸ್ ಒಯು ವಿಸಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ರಂಗಸ್ವಾಮಿ ಅವರು, ನಿವೃತ್ತರಾದ ಮೂರು ತಿಂಗಳ ಒಳಗೆ ಪೆನ್ಷನ್ ನೀಡಬೇಕು. ಈವರಗೆ ಯಾವುದೇ ಗ್ರಾಜ್ಯುಟಿ ನೀಡಿಲ್ಲ. ಗಳಿಕೆ ರಜೆ ಹಣ ನಿವೃತ್ತಿ ದಿನವೇ ಕೊಡಬೇಕು. ಆರು ತಿಂಗಳಿಂದ ಅಲೆದಾಡಿದರೂ ಪರಿಹಾರವಿಲ್ಲ. ಪ್ರತಿ ಬಾರಿ ಅಲೆದು ಅಲೆದು ಸುಸ್ತಾಗಿದೆ ಎಂದು ಕಿಡಿಕಾರಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.