ರಬಕವಿ-ಬನಹಟ್ಟಿ: ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮೂವರನ್ನು ಬಂಧಿಸಿದ ಘಟನೆ ನಡೆದಿದೆ.
ಅನ್ವರ ಮಕಾನದಾರ, ಅಯಾನ್ ಪಾಟೀಲ, ಜಾವಿದ್ ನದಾಫ್ ಬಂಧಿತರು.
ರಬಕವಿಯ ಬಸ್ ನಿಲ್ದಾಣದಲ್ಲಿ ತೇರದಾಳದ ದಾನಿಗೊಂಡ ಕಾಲೇಜಿನಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಾಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರಲ್ಲಿ ಓರ್ವ 20 ವರ್ಷದ ಯುವತಿ ಮಹಾಲಿಂಗಪೂರಕ್ಕೆ ತೆರಳುವುದು ನಿತ್ಯವಾಗಿತ್ತು.
3-4 ದಿನಗಳಿಂದ ಆರೋಪಿತರಾದ ಅನ್ವರ ಮಕಾನದಾರ, ಅಯಾನ್ ಪಾಟೀಲ, ಜಾವಿದ್ ನದಾಫ್ ಎಂಬವರು ಒಂದೇ ಬೈಕ್ನಲ್ಲಿ ಬರುತ್ತ ಇವರನ್ನು ಬೆನ್ನತ್ತಿ ನೋಡುವುದು, ಚುಡಾಯಿಸುವುದು ಮಾಡುತ್ತಿದ್ದರು.
ಕಳೆದ ಬುಧವಾರ ಸಂಜೆ 6.15ರ ಸುಮಾರಿಗೆ ಕಾಲೇಜು ಮುಗಿಸಿಕೊಂಡು ಮಹಾಲಿಂಗಪೂರಕ್ಕೆ ತೆರಳುವ ಸಂದರ್ಭ ಮತ್ತೇ ಬೈಕ್ವೊಂದರಲ್ಲಿ ಬಂದು ಮೊಬೈಲ್ ನಲ್ಲಿ ಫೋಟೊ ತೆಗೆಯುತ್ತಿದ್ದರು. ನಂಬರ್ ಕೊಡುವಂತೆ ಒತ್ತಾಯಿಸಿದರು.
ಆಗ ಮೊಬೈಲ್ ನಂಬರ್ ನೀಡಲು ನಿರಾಕರಿಸಿದಾಗ ಆಕೆಯೊಂದಿಗೆ ಜಗಳವಾಡಿ ಕಪಾಳಕ್ಕೆ ಹೊಡೆದು ಭಾರಿ ಒಳಪೆಟ್ಟುಪಡಿಸಿದ್ದಲ್ಲದೆ ಜಗಳ ಬಿಡಿಸಿಲು ಹೋದ ಇತರ ವಿದ್ಯಾರ್ಥಿಗಳಿಗೂ ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ್ದಾರೆಂದು ದೂರುದಾರರು ನೀಡಿದ ದೂರಿನಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ತಾಲೂಕಿನಾದ್ಯಂತ ಕಟ್ಟೆಚ್ಚರ ವಹಿಸಿದ್ದಾರೆ.
ಇತ್ತ ಖಾಕಿ ಪಡೆ ರಬಕವಿ-ಬನಹಟ್ಟಿ ನಗರಾದ್ಯಂತ ಕಣ್ಗಾವಲು ಇಟ್ಟಿದ್ದು, ಅಲ್ಲಲ್ಲಿ ಇಂಥ ಪ್ರಕರಣಗಳಿಗೆ ಸಂಬಂಧಿಸಿದಂತೆ ಯುವಕರನ್ನು ತರಾಟೆಗೆ ತೆಗೆದುಕೊಳ್ಳುವ ದೃಶ್ಯ ಕಂಡು ಬರುತ್ತಿದೆ. ಸಂಜೆಯಾಗುತ್ತಿದ್ದಂತೆ ಅಲ್ಲಲ್ಲಿ ಪುಂಡರು ಕೂರುತ್ತಿರುವುದನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಪೊಲೀಸ್ ರುಚಿ ತೋರಿಸುವಲ್ಲಿ ನಿರತರಾಗಿದ್ದಾರೆ.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.