ಮನೆ ರಾಜ್ಯ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ..? – ಸಿಎಂ

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ..? – ಸಿಎಂ

0

ಬೆಂಗಳೂರು : ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ ಸಿದ್ದರಾಮಯ್ಯ ಎಂಬ ಚರ್ಚೆ ಶುರುವಾಗಿದೆ.

ಶಿವಾಜಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಕ್ರೈಸ್ತ ಸಮುದಾಯ ಮನವಿ ಮಾಡಿದ್ದರು. ಆ ವೇಳೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.

ಈ ನಡುವೆ ಶನಿವಾರ ಮೈಸೂರಿನಲ್ಲಿ ಮತಾಂತರ ಅವರವರ ಹಕ್ಕು, ತಪ್ಪಿಸಲು ಆಗಲ್ಲ. ಹಾಗಾಗಿ ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸಾಧ್ಯತೆಯಿದೆ ಎಂದರು.

ಈಗಾಗಲೇ ಕಳೆದ ವರ್ಷವೇ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿತ್ತು. ಆದರೆ, ವಿಧಾನಸಭೆಯ ಉಭಯ ಸದನಗಳ ಮತಾಂತರ ನಿಷೇಧ ಕಾಯ್ದೆ ವಾಪಸ್‌ಗೆ ಸರ್ಕಾರ ಬಿಲ್ ಮಂಡಿಸಿರಲಿಲ್ಲ ಎಂದು ಹೇಳಿದರು.