![](https://savaltv.com/wp-content/uploads/2022/08/WhatsApp-Image-2022-08-08-at-11.08.32-AM.jpeg)
ಹಾಸನ(Hassan): ಗದ್ಧೆ ಕೆಲಸಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ್ದು ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಸುಳ್ಳಕ್ಕಿ ಮೇಲಕೆರೆ ಗ್ರಾಮದಲ್ಲಿ ನಡೆದಿದೆ.
ಕೆಂಪಣ್ಣ ಆನೆ ದಾಳಿಗೆ ಮೃತಪಟ್ಟಿರುವ ರೈತ. ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದರು ಕ್ರಮಕೈಗೊಳ್ಳದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.