ಮನೆ ರಾಜ್ಯ ಹಾಸನ: ರೈತನ ಮೇಲೆ ಕರಡಿ ದಾಳಿ

ಹಾಸನ: ರೈತನ ಮೇಲೆ ಕರಡಿ ದಾಳಿ

0

ಹಾಸನ: ಕರಡಿ ವಯೋವೃದ್ದ ರೈತನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಅರಸೀಕೆರೆ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಜರುಗಿದೆ.

Join Our Whatsapp Group

 ಶಿವಣ್ಣ (60) ಎಂಬ ರೈತ ಕರಡಿ ದಾಳಿಯಿಂದ ಗಾಯಗೊಂಡವರಾಗಿದ್ದಾರೆ.

ಅರಸೀಕೆರೆ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಶಿವಣ್ಣ ಎಂದಿನಂತೆ ಶನಿವಾರ ಜಮೀನಿಗೆ ಕೆಲಸಕ್ಕೆ ಹೋಗಿದ್ದರು. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇಂದಿನಿಂದ ಬಂದ ಕರಡಿ ಏಕಾಎಕಿ ಆತನ ಮೇಲೆ ದಾಳಿ ನಡೆಸಿದೆ. ಕರಡಿ ದಾಳಿಗೆ ಪ್ರತಿಯಾಗಿ ದಾಳಿ ನಡೆಸಲು ಸಾಧ್ಯವಾಗದ ಶಿವಣ್ಣ ಕಿರುಚಾಟ ಮಾಡಿದ್ದಾನೆ. ಕಿರುಚಾಟದ ಶಬ್ದ ಕೇಳಿದ ಅಕ್ಕ ಪಕ್ಕದ ಜಮೀನಿನ ರೈತರು ಬಂದು ಕರಡಿ ಓಡಿಸುವ ಪ್ರಯತ್ನ ಮಾಡಿದ್ದು ನಂತರ ರೈತನ ಜೀವ ಉಳಿಸಿದ್ದಾರೆ.

ಇನ್ನು ಗಾಯಗೊಂಡಿರುವ ಶಿವಣ್ಣನನ್ನು ಪ್ರಥಮ ಚಿಕಿತ್ಸೆಗಾಗಿ ಅರಸಿಕೆರೆಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ,ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹಾಸನದ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

ಹಿಂದಿನ ಲೇಖನರಾತ್ರಿ ಸೌತೆಕಾಯಿ ಸೇವಿಸುದು ಅನಾರೋಗ್ಯಕ್ಕೆ ಕಾರಣವಾಗಬಹುದು
ಮುಂದಿನ ಲೇಖನ“ಅಪರೂಪ’ ಚಿತ್ರ ವಿಮರ್ಶೆ