ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಹಾಸನ ಪೆನ್ ಡ್ರೈವ್ ವಿಡಿಯೋ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜಿಸಿ ಆದೇಶಿಸಿದೆ.
ಪ್ರಕರಣದ ಕೂಲಂಕಷ ತನಿಖೆಗಾಗಿ ರಾಜ್ಯ ಸರ್ಕಾರವು ಎಸ್ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್ಪಿ ಸುಮನ್ ಪನ್ನೇಕರ್ ಅವರನ್ನ ನಿಯೋಜಿಸಿತ್ತು. ಇದೀಗ ರಾಜ್ಯ ಸರ್ಕಾರ 18 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಯನ್ನ ನಿಯೋಜಿಸಿದೆ. ಇದರಿಂದ ಎಸ್ಐಟಿ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ.
ಪ್ರಕರಣ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸರನ್ನೂ ಒಳಗೊಂಡಂತೆ 18 ಮಂದಿ ಪರಿಣಿತರನ್ನ ನಿಯೋಜಿಸಲಾಗಿದೆ, ಹಾಗಾದರೆ ತಂಡದಲ್ಲಿ ಯಾರ್ಯಾರು ಇದ್ದಾರೆ ಎಂಬ ಮಾಹಿತಿ ಇಲ್ಲಿದೆ.
ಎಸ್ಐಟಿ ತಂಡದ ಸದಸ್ಯರು: ಎಸಿಪಿ ಪ್ರಿಯದರ್ಶಿನಿ ಈಶ್ವರ್ ಸಾನಿಕೊಪ್ಪ, ಎಸಿಪಿ ಸತ್ಯನಾರಾಯಣ ಸಿಂಗ್.ಎಸ್.ಬಿ, ಎಸಿಪಿ ಧನ್ಯ ಎನ್ ನಾಯ್, ಪಿಐ ಸುಮರಾಣಿ.ಬಿ.ಎಸ್, ಸ್ವರ್ಣ ಜಿ.ಎಸ್, ಭಾರತಿ.ಜಿ, ಹೇಮಂತ್ ಕುಮಾರ್, ರಾಜಾ.ಜಿ.ಸಿ, ಪಿಎಸ್ಐಗಳಾದ ವೈಲೆಟ್ ಸ್ಲಿಮೀನಾ, ವಿನುತ, ನಂದೀಶ್, ಕುಮುದ, ಹೆಡ್ಕಾನ್ಸ್ಟೇಬಲ್ಗಳಾದ ಮನೋಹರ, ಸುನೀಲ್ ಬೆಳವಗಿ, ಬಸವರಾಜ್ ಮೈಗೇರಿ, ಸುಮತಿ, ಕಾನ್ಸ್ಟೇಬಲ್ಗಳಾದ ರಂಗಸ್ವಾಮಿ ಹಾಗೂ ಮಹಿಳಾ ಕಾನ್ಸ್ಟೇಬಲ್ ಸಿಂಧು ಅವರನ್ನ ನೇಮಕ ಮಾಡಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೂರೈಸಿದ್ದು ವರ್ಷ ಸಾಧಿಸಿದ್ದು ಶೂನ್ಯ – ಬಿವೈವಿ
ಮೋದಿ ನೇತೃತ್ವದ BJP 430 ಸೀಟ್ ಗೆಲ್ಲುತ್ತೆ ಎಂದ ಚೀನಾ….
ನಮ್ಮ ಹೆಮ್ಮೆಯ ಮೈಸೂರು
ಒಂದು ಅದ್ಭುತ. ಫುಟ್ಬಾಲ್ನ ಸಂಯೋಜನೆ..
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.