ಮನೆ ಅಪರಾಧ ಹಾಸನ: ಆಣೆ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವು

ಹಾಸನ: ಆಣೆ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವು

0

ಹಾಸನ(Hassan):  ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ನಡೆದಿದೆ.

ಚಂದ್ರು (35) ಆನಂದ್ (30) ಮೃತ ದುರ್ದೈವಿಗಳು.

ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಕಳೆದ ರಾತ್ರಿ ಗಂಗೆ ಮೇಲೆ ಆಣೆ ಮಾಡಲು ಕೆರೆ ಬಳಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶವವನ್ನ ಹೊರೆತೆಗೆಯಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಿಂದಿನ ಲೇಖನಪತಿಯ ಸಹಿಯಿರುವ ಚೆಕ್ ಬೌನ್ಸ್ ಆದರೆ ಪತ್ನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅವಕಾಶವಿಲ್ಲ: ಹೈಕೋರ್ಟ್
ಮುಂದಿನ ಲೇಖನಕೂಡಲಸಂಗಮ ಕ್ಷೇತ್ರ: ನಾಲ್ವರು ಸಚಿವರಿಂದ ಪವಿತ್ರ ಮೃತ್ತಿಕೆ ಸಂಗ್ರಹಣೆ