ಮನೆ ಅಪರಾಧ ಹಾವೇರಿ: ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 33 ಲಕ್ಷ ರೂ. ದೋಚಿದ ಕಳ್ಳರು

ಹಾವೇರಿ: ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 33 ಲಕ್ಷ ರೂ. ದೋಚಿದ ಕಳ್ಳರು

0

ಹಾವೇರಿ : ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದ 33 ಲಕ್ಷ ರೂಪಾಯಿ ದೋಚಿದ ಘಟನೆ ನಗರದಲ್ಲಿ ನಡೆದಿದೆ.

Join Our Whatsapp Group

ಹಾವೇರಿಯ ಬಸವೇಶ್ವರ ನಗರದ ಹತ್ತನೇ ಕ್ರಾಸ್​ನಲ್ಲಿರುವ ಸಂತೋಷ ಹಿರೇಮಠ ಎಂಬುವರಿಗೆ ಸೇರಿದ ಹಣ ಕಳ್ಳತನವಾಗಿದೆ. ಸಿವಿಲ್ ಕಾಂಟ್ರ್ಯಾಕ್ಟರ್ ಆಗಿರುವ ಸಂತೋಷ ಹಾವೇರಿಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೈನಂದಿನ ವ್ಯವಹಾರಕ್ಕಾಗಿ 33 ಲಕ್ಷ ರೂಗಳನ್ನ ಸಂಬಂಧಿಕರ ಖಾತೆಗಳಿಂದ ಚೆಕ್ ಮುಖಾಂತರ ಡ್ರಾ ಮಾಡಿಕೊಂಡಿದ್ದರು. ಆ ಹಣವನ್ನ ಕಾರಿನ ಹಿಂಭಾಗದ ಸೀಟಿನಲ್ಲಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಜೆ ನಾಲ್ಕು ಗಂಟೆ ಐದು ನಿಮಿಷಕ್ಕೆ ಮನೆ ಮುಂದೆ ಕಾರು ನಿಲ್ಲಿಸಿ, ಕಾರಿನಲ್ಲಿ ಹಣ ಬಿಟ್ಟು ಮನೆಯೊಳಗೆ ಹೋಗಿದ್ದರು. ಮನೆಯಲ್ಲಿ ಊಟ‌ ಮಾಡಿ ವಿಶ್ರಾಂತಿ ಮುಗಿಸಿ ವಾಪಸ್ ಸಂಜೆ ಐದು ಗಂಟೆ ಇಪ್ಪತ್ತು ನಿಮಿಷಕ್ಕೆ ಕಾರಿನ ಹತ್ತಿರ ಬಂದು ನೋಡಿದಾಗ, ಕಾರಿನ ಗ್ಲಾಸ್ ಒಡೆದು ಹಣ‌ ಕಳ್ಳತನವಾಗಿರುವುದು ತಿಳಿದಿದೆ ಎಂದಿದ್ದಾರೆ.

ಎರಡು ಬೈಕ್​​ಗಳಲ್ಲಿ ಬಂದಿದ್ದ ನಾಲ್ವರ ಗ್ಯಾಂಗ್​ನಲ್ಲಿ ಒಬ್ಬ ಕಾರಿನ ಬಳಿ ಸುತ್ತಾಡಿ, ಗ್ಲಾಸ್ ಒಡೆದು, ಕಾರಿನ ಒಳಹೊಕ್ಕು ಹಣವಿದ್ದ ಬ್ಯಾಗ್ ತೆಗೆದುಕೊಂಡಿದ್ದಾನೆ. ನಂತರ ಬೈಕ್​ನಲ್ಲಿ ಬಂದ ಮತ್ತೊಬ್ಬ ಖದೀಮ ಆತನನ್ನು ಕರೆದುಕೊಂಡು ಪರಾರಿಯಾಗಿದ್ದಾನೆ. ಖದೀಮರ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಎಸ್ಪಿ, ಹೆಚ್ಚುವರಿ ಎಸ್ಪಿ ಹಾಗೂ ಪೊಲೀಸರು, ಬೆರಳಚ್ಚು ತಜ್ಞರು ಪರಿಶೀಲನೆ ನಡೆಸಿದ್ದಾರೆ.

‘ಈ ಕುರಿತು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಗುರುವಾರ ತಡರಾತ್ರಿ ಪ್ರಕರಣ ದಾಖಲಾಗಿದ್ದು, ಪ್ರಕರಣದ‌ ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಎಸ್​ ಪಿ ಅಂಶುಕುಮಾರ್ ತಿಳಿಸಿದ್ದಾರೆ.