ಮನೆ ರಾಜ್ಯ ಬೈಕ್‌ ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು

ಬೈಕ್‌ ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು

0

ಶ್ರೀರಂಗಪಟ್ಟಣ:ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಮತ್ತು ಗೌಡಹಳ್ಳಿ ನಡುವೆ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವೀಸ್‌ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ.


ತಾಲ್ಲೂಕಿನ ಗೌಡಹಳ್ಳಿ ಗ್ರಾಮದ ಪಟೇಲ್ ರಾಮಲಿಂಗೇಗೌಡ ಅವರ ಮಗ ಶ್ರೀಧರ (33) ಮತ್ತು ಶ್ರೀನಿವಾಸ ಅಗ್ರಹಾರ ಗ್ರಾಮದ ಲೋಕೇಶ್ ಅವರ ಮಗ ಪುನೀತ್ ಅಲಿಯಾಸ ಪೂಜಾರಿ ( 26) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶ್ರೀಧರ್ ಅವರ ಸಹೋದರ ಯೋಗೇಶ್ ಮತ್ತು ಪುತ್ರ ದರ್ಶನ್ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯಿಂದಾಗಿ ಮಂಡ್ಯ- ಮೈಸೂರು ಸರ್ವೀಸ್ ರಸ್ತೆಯಲ್ಲಿ ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಶ್ರೀರಂಗಪಟ್ಟಣದಿಂದ ಗೌಡಹಳ್ಳಿಗೆ ತೆರಳುತ್ತಿದ್ದ ಶ್ರೀಧರ್ ಮತ್ತು ಮಂಡ್ಯದಿಂದ ಸ್ವಗ್ರಾಮಕ್ಕೆ ಬರುತ್ತಿದ್ದ ಪುನೀತ್ ಅವರ‌ ಬೈಕ್’ಗಳು ಮುಖಾಮುಖಿ ಡಿಕ್ಕಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಕರ್ನಾಟಕದಲ್ಲಿ ಕನ್ನಡ ಮಾತನಾಡುವ ವಾತಾವರಣ ಹಾಗೂ ಅನಿವಾರ್ಯತೆ ಸೃಷ್ಟಿಸುವುದು ಅಗತ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ಲೇಖನಅಂಬಾಭವಾನಿ