ಹುಣಸೂರು: ಕೊಡಗು ಹಾಗೂ ನಾಗರಹೊಳೆ ಉದ್ಯಾನದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಒಳ ಹರಿವು ಹೆಚ್ಚುತ್ತಿದ್ದು, ಹನಗೋಡು ಅಣೆಕಟ್ಟೆ ಮೇಲೆ 2500 ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕಳೆದ ಮೂರು ದಿನಗಳಿಂದ ಲಕ್ಷ್ಮಣತೀರ್ಥ ನದಿ ಹುಟ್ಟುವ ಇರ್ಪು ಸೇರಿದಂತೆ ಸುತ್ತಮುತ್ತ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎರಡೇ ದಿನದಲ್ಲಿ ಲಕ್ಷ್ಮಣತೀರ್ಥ ನದಿಯ ಹನಗೋಡು ಅಣೆಕಟ್ಟೆ ತುಂಬಿ ಸುಮಾರು ಎರಡೂವರೆ ಅಡಿಯಷ್ಟು ನೀರು ಹರಿಯುತ್ತಿದೆ. ಶೀಘ್ರದಲ್ಲೇ ಮುಖ್ಯ ಕಾಲುವೆಗೆ ನೀರು ಹರಿಸಿ ಕೆರೆಗಳಿಗೆ ನೀರು ತುಂಬಿಸಲಾಗುವುದೆಂದು ಹಾರಂಗಿ ಹನಗೋಡು ಉಪ ವಿಭಾಗದ ಎಇಇ ಅಶೋಕ್ ತಿಳಿಸಿದ್ದಾರೆ.
ನದಿಯಲ್ಲಿ ನೀರಿನ ಹರಿವು ಹೆಚ್ಚಳದಿಂದಾಗಿ ಹನಗೋಡಿನ ಸೇತುವೆ ಬಳಿ ಮತ್ತು ಹುಣಸೂರು ನಗರದ ಮದ್ಯಭಾಗದಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿನ ಅಪಾರ ಪ್ರಮಾಣದ ಅಂತರಗಂಗೆ, ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಜೊತೆಗೆ ನಗರದ ಕೊಳಚೆ ನೀರಿನೊಂದಿಗೆ ಕೊಚ್ಚಿ ಕೊಂಡು ಹೋಗುತ್ತಿದೆ.
ರೈತರಲ್ಲಿ ಸಂತಸ:
ಮಳೆ ಇಲ್ಲದೆ ಸೊರಗುತ್ತಿದ್ದ ತಂಬಾಕು ಬೆಳೆಗೆ ಈ ಮಳೆಯು ಸಂಜೀವಿನಿಯಂತಾಗಿದೆ. ಇದರಿಂದ ತಂಬಾಕು ಹಾಗೂ ಶುಂಠಿ ಬೆಳೆಗಾರರು ಹರ್ಷಗೊಂಡಿದ್ದಾರೆ. ಇದೇ ರೀತಿ ಮಳೆ ಮುಂದುವರೆದಲ್ಲಿ ತಂಬಾಕು ಹಾಗೂ ಶುಂಠಿ ಬೆಳೆ ಕೊಳೆಯುವ ಭೀತಿಯೂ ಎದುರಾಗಿದೆ ಎನ್ನುತ್ತಾರೆ ರೈತರು.
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
ನಾಡಪ್ರಭು ಕೆಂಪೇಗೌಡ ಜಯಂತಿ, ಪ್ರಯುಕ್ತ 2000 ಹೋಳಿಗೆ ಹಂಚಿಕೆ !
FCI ಹುದ್ದೆಗೆ ಆನ್’ಲೈನ್’ನಲ್ಲಿ ಅರ್ಜಿ ಸಲ್ಲಿಸಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.