ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಮತಯಂತ್ರಗಳನ್ನು ಸ್ಟ್ರಾಂಗ್ ರೂಮ್’ನಲ್ಲಿ ಭದ್ರವಾಗಿ ಇರಿಸಲಾಗಿದೆ.
ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ. ಕೋಟ್ಯಾಂತರ ಮತದಾರರನ್ನು ಹೊಂದಿರುವ ಕರ್ನಾಟದಲ್ಲಿಯೂ ಮತ ಎಣಿಕೆ ಎಂಬುದು ಅಷ್ಟು ಸುಲಭವಲ್ಲ. ಇದು ಒಂದು ಸಂಕೀರ್ಣ ಕಾರ್ಯವಿಧಾನವಾಗಿದ್ದು ಅದು ಹೆಚ್ಚಿನ ನಿಖರತೆಯ ಅಗತ್ಯವಿರುತ್ತದೆ.
ಮತ ಎಣಿಕೆಯ ಸ್ಥಳ ಆಯ್ಕೆ ಹೇಗೆ?
ವಿಧಾನಸಭಾ ಕ್ಷೇತ್ರದ ನಿರ್ಧಿಷ್ಟ ಒಂದು ಸ್ಥಳದಲ್ಲಿ ಮತ ಎಣಿಕೆ ಮಾಡಲಾಗುತ್ತದೆ
ಬಹು ವಿಧಾನಸಭಾ ಕ್ಷೇತ್ರಗಳೊಂದಿಗೆ ಸೀಟುಗಳ ಸಂಖ್ಯೆಯೂ ಹೆಚ್ಚಾಗಿದ್ದರೆ, ಮತಗಳ ಸಂಖ್ಯೆಯನ್ನು ಆಧರಿಸಿ ಹೆಚ್ಚಿನ ಎಣಿಕೆ ಕೇಂದ್ರಗಳನ್ನು ನೀಡಲಾಗುತ್ತದೆ
ಮತ ಎಣಿಕೆ ಮಾಡುವ ಸ್ಥಳವನ್ನು ರಿಟರ್ನಿಂಗ್ ಆಫೀಸರ್ ಅಥವಾ ಚುನಾವಣಾಧಿಕಾರಿ (RO) ಘೋಷಿಸುತ್ತಾರೆ
ಅಸಿಸ್ಟೆಂಟ್ ರಿಟರ್ನಿಂಗ್ ಆಫೀಸರ್ ಅಥವಾ ಸಹಾಯಕ ಚುನಾವಣಾಧಿಕಾರಿ (ARO) ಅವರು ಅನೇಕ ಕೇಂದ್ರಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ
ಮತ ಎಣಿಕೆ ಹೇಗೆ ನಡೆಯುತ್ತದೆ?
ಬಹು ಟೇಬಲ್ಗಳನ್ನು ಹೊಂದಿರುವ ದೊಡ್ಡ ಸಭಾಂಗಣದಲ್ಲಿ ಮತಗಳನ್ನು ಎಣಿಸಲಾಗುತ್ತದೆ
ಜನಸಂದಣಿ ಹೆಚ್ಚಾಗುವ ಅವಕಾಶವಿದ್ದಲ್ಲಿ ಚುನಾವಣಾ ಆಯೋಗ (ಇಸಿ) ಹೆಚ್ಚಿನ ಸಂಖ್ಯೆಯ ಕೊಠಡಿಗಳನ್ನು ಒದಗಿಸುತ್ತದೆ
ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ
ಹೆಚ್ಚಾಗಿ, ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳನ್ನು ಮತ ಎಣಿಕೆ ಕೇಂದ್ರಗಳಾಗಿ ಬಳಸಲಾಗುತ್ತದೆ
ಹೇಗಿರಲಿದೆ ಎಣಿಕೆ ಪ್ರಕ್ರಿಯೆ?
ಚುನಾವಣಾಧಿಕಾರಿ (RO) ಅವರ ಮೇಲ್ವಿಚಾರಣೆಯಲ್ಲಿ ಎಣಿಕೆ ಪ್ರಾರಂಭವಾಗುತ್ತದೆ
ಎಣಿಕೆ ಸಿಬ್ಬಂದಿಯನ್ನು ನೇಮಿಸಿದ ನಂತರ ಮೂರು-ಹಂತದ ಎಣಿಕೆ ಪ್ರಕ್ರಿಯೆಯು ಸಾಮಾನ್ಯವಾಗಿ ನಡೆಯುತ್ತವೆ
ಚುನಾವಣಾ ಏಜೆಂಟರೊಂದಿಗೆ ಅಭ್ಯರ್ಥಿಗಳಿಗೂ ತಮ್ಮ ಮತ ಎಣಿಕೆ ಏಜೆಂಟರ ಜೊತೆ ಎಣಿಕೆ ಕೇಂದ್ರದಲ್ಲಿರಲು ಅವಕಾಶ ನೀಡಲಾಗುತ್ತದೆ
ಮೊದಲ ಹಂತದಲ್ಲಿ ಅಂಚೆಮತಗಳ ಎಣಿಕೆ ಮಾಡಲಾಗುತ್ತದೆ. 30 ನಿಮಿಷಗಳ ನಂತರ ವಿದ್ಯುನ್ಮಾನ ಮತಯಂತ್ರದ ಮತಗಳ ಎಣಿಕೆ ಪ್ರಾರಂಭವಾಗುತ್ತದೆ
ಮತ ಎಣಿಕೆಯ ಸಮಯದ ವಿವರ
ಅಧಿಕೃತ ಎಣಿಕೆ ಸಮಯ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗುತ್ತದೆ
ಚುನಾವಣಾಧಿಕಾರಿಗಳು ಮತ್ತು ಮತ ಎಣಿಕೆ ಏಜೆಂಟರನ್ನು ರಾಜಕೀಯ ಪಕ್ಷಗಳು ನೇಮಿಸಿದ್ದು, ಅಭ್ಯರ್ಥಿಗಳು ಬೆಳಗ್ಗೆ 5 ಗಂಟೆಯ ಮೊದಲು ಕೇಂದ್ರಗಳನ್ನು ತಲುಪುತ್ತಾರೆ
ಬೆಳಿಗ್ಗೆ 6 ಗಂಟೆಯೊಳಗೆ ಎಣಿಕೆ ಟೇಬಲ್ಗಳಲ್ಲಿ ತಮ್ಮ ಸ್ಥಾನಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.