ಮನೆ Uncategorized ಮೈಸೂರಿನಲ್ಲಿ ಹೈ-ಅಲರ್ಟ್: ಗಡಿಭಾಗದಲ್ಲಿ ತಪಾಸಣೆ ಚುರುಕು

ಮೈಸೂರಿನಲ್ಲಿ ಹೈ-ಅಲರ್ಟ್: ಗಡಿಭಾಗದಲ್ಲಿ ತಪಾಸಣೆ ಚುರುಕು

0
ಸಾಂದರ್ಭಿಕ ಚಿತ್ರ

ಮೈಸೂರು(Mysuru): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ 3 ಸರಣಿ ಹತ್ಯೆಗಳಿಂದ ಎಚ್ಚೆತ್ತುಕೊಂಡಿರುವ ಮೈಸೂರು ನಗರದ ಪೊಲೀಸರು ಗಡಿಭಾಗದಲ್ಲಿ ತಪಾಸಣೆ ಚುರುಕುಗೊಳಿಸಿದ್ದಾರೆ.

ಮಂಗಳೂರು, ಕೊಡಗು ಹಾಗೂ ಕೇರಳದಿಂದ ಮೈಸೂರು ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ನಾಕಾಬಂಧಿ ಹಾಕಲಾಗಿದ್ದು, ಮೈಸೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಲ್ಲೂ ಚೆಕ್​ಪೋಸ್ಟ್ ನಿರ್ಮಾಣ ಮಾಡಿ ತಪಾಸಣೆ ನಡೆಸಲಾಗುತ್ತಿದೆ.

ಈ ವಿಶೇಷ ಅಭಿಯಾನ 10 ದಿನಗಳ ಕಾಲ ನಡೆಯಲಿದ್ದು, ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5.30ರವರೆಗೆ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.

ನಗರ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್ ಕಮಿಷನರ್ ಡಾ. ಚಂದ್ರಗುಪ್ತ, ಮಂಗಳೂರು ಘಟನೆಯ ನಂತರ ಈಗ ಮೈಸೂರು ನಗರಕ್ಕೆ ಬರುವ ಪ್ರತಿಯೊಂದು ವಾಹನಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಇಲ್ಲಿಗೆ ಬರುವ ಜನರು ಯಾವ ಉದ್ದೇಶಕ್ಕಾಗಿ ಬರುತ್ತಿದ್ದಾರೆ, ಎಲ್ಲಿ ಮತ್ತು ಎಷ್ಟು ದಿನ ವಾಸ್ತವ್ಯ ಹೂಡುತ್ತಿದ್ದಾರೆ ಎಂಬ ಮಾಹಿತಿ ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ನಗರದ ಎಲ್ಲ ಭಾಗಗಳಲ್ಲಿ ಪರಿಶೀಲನೆ ನಡೆಸಿ ಪ್ರತಿಯೊಂದು ವಾಹನದ ನೋಂದಣಿ ಸಂಖ್ಯೆ ಹಾಗೂ ಪ್ರಯಾಣಿಕರ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯಲಾಗುತ್ತಿದೆ. ಇದರ ಜೊತೆಗೆ ನಗರದಲ್ಲಿ ಗುಪ್ತಚರ ಇಲಾಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಹಿಂದಿನ ಲೇಖನಮಂಡ್ಯ ಅಪರ ಜಿಲ್ಲಾಧಿಕಾರಿಯಾಗಿ ಡಾ ಹೆಚ್. ಎಲ್. ನಾಗರಾಜ್ ನೇಮಕ
ಮುಂದಿನ ಲೇಖನಅಂಜನಾದ್ರಿ ಕ್ಷೇತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ:  ಸಿಎಂ ಬೊಮ್ಮಾಯಿ