ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರು ಮಧ್ಯಪ್ರವೇಶಿಸುವುದು ಸಹಿಸುವಂತದ್ದಲ್ಲ. ಇಂತಹ ನಡವಳಿಕೆಯನ್ನು ಮುಂದುವರೆಸಿದರೆ ಆರೋಪಿತ ಪೊಲೀಸರ ವಿರುದ್ಧ ತನಿಖೆಗೆ ಆದೇಶಿಸಬೇಕಾಗುತ್ತದೆ ಎಂದು ಹೈಕೋರ್ಟ್ ಕಟು ಎಚ್ಚರಿಕೆ ನೀಡಿದೆ.
ತಮ್ಮ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ಹಲ್ಲೆಗೊಳಗಾಗಿರುವ ತನಗೆ ಪರಿಹಾರ ಕೊಡಿಸಬೇಕು ಎಂದು ಕೋರಿ ಪೊಲೀಸರಿಂದ ಹಲ್ಲೆಗೊಳಗಾಗಿರುವ ವಕೀಲ ಕುಲದೀಪ್ ಶೆಟ್ಟಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿರುವ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿವಿಲ್ ವ್ಯಾಜ್ಯಗಳಲ್ಲಿ ಪೊಲೀಸರ ಮಧ್ಯಪ್ರವೇಶಿಸುವಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಮನೆ ಮುಂಭಾಗದ ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿದಾರ ವಕೀಲ ಕುಲದೀಪ್ ಶೆಟ್ಟಿ ಹಾಗೂ ಮತ್ತೋರ್ವ ವ್ಯಕ್ತಿ ನಡುವೆ ಜಗಳವಿತ್ತು. ದೂರುದಾರ ವ್ಯಕ್ತಿ ಪ್ರಭಾವಿ ಎಂಬ ಕಾರಣಕ್ಕೆ ಪೊಲೀಸರು ಹೀಗೆ ನಡೆದುಕೊಳ್ಳಬಹುದೇ. ಎಫ್’ಐಆರ್ ದಾಖಲಿಸುವ ಮುನ್ನವೇ ವಕೀಲ ಕುಲದೀಪ್ ಅವರನ್ನು ಎಳೆದೊಯ್ದು ಬಡಿದಿದ್ದೀರಿ.
ಪೊಲೀಸರ ಹಲ್ಲೆ ಬಳಿಕ ಅವರ ವಿರುದ್ಧ ಕ್ರಮ ಕೋರಿ ವಕೀಲ ಕುಲದೀಪ್ ನೀಡಿದ್ದ ದೂರಿನ ಮೇರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೈಕೋರ್ಟ್ ಪ್ರಶ್ನಿಸಿದ ಬಳಿಕ ತಡವಾಗಿ ಆರೋಪಿತ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೈಕೋರ್ಟ್ ಪೊಲೀಸರ ನಡವಳಿಕೆಗೆ ಆಕ್ರೋಶ ವ್ಯಕ್ತಪಡಿಸಿದೆ.
ಅಲ್ಲದೇ, ಸಿಆರ್’ಪಿಸಿ ಸೆಕ್ಷನ್ 41 ರ ಅಡಿ ಸಮನ್ಸ್ ನೀಡಿ ಹೇಳಿಕೆ ಪಡೆದು ತೃಪ್ತಿಕರ ಅಲ್ಲ ಎನ್ನಿಸಿದಾಗ ಮಾತ್ರ ಪೊಲೀಸರು ಬಂಧಿಸಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಅರ್ಜಿದಾರ ವಕೀಲ ಕುಲದೀಪ್ ಅವರಿಗೆ ಪೊಲೀಸರು ನೋಟಿಸ್ ನೀಡಿಲ್ಲ. ಇನ್ನು ಅರ್ಜಿದಾರರ ವಿರುದ್ಧ ದಾಖಲಿಸಿರುವ ಐಪಿಸಿ ಸೆಕ್ಷನ್ 447 (ಅತಿಕ್ರಮ ಪ್ರವೇಶ) ಹಾಗೂ 379 (ಕಳ್ಳತನ) ಅಡಿ ತಲಾ 3 ತಿಂಗಳು ಮತ್ತು 3 ವರ್ಷದ ಗರಿಷ್ಠ ಶಿಕ್ಷೆ ವಿಧಿಸಬಹುದಷ್ಟೇ. ಗರಿಷ್ಠ 7 ವರ್ಷ ಶಿಕ್ಷೆಯಾಗಬಹುದಾದ ಪ್ರಕರಣದಲ್ಲಿ ಆರೋಪಿ ಬಂಧಿಸಬಹುದು. ಈ ನಿಟ್ಟಿನಲ್ಲಿ ನೋಡಿದಾಗ ಪೊಲೀಸರು ಕುಲದೀಪ್ ಶೆಟ್ಟಿ ಅವರ ಮೂಲಭೂತ ಹಕ್ಕುಗಳನ್ನು ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂಬುದು ಸ್ಪಷ್ಟ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೇ, ತಪ್ಪಿತಸ್ಥ ಪೊಲೀಸರು ಅರ್ಜಿದಾರರಿಗೆ ಪರಿಹಾರ ನೀಡಬೇಕು. ಪರಿಹಾರದ ಹಣವನ್ನು ಆರೋಪಿ ಪೊಲೀಸರಿಂದಲೇ ವಸೂಲಿ ಮಾಡಬೇಕು ಎಂದಿರುವ ಹೈಕೋರ್ಟ್ ಪರಿಹಾರಕ್ಕೆ ಸಂಬಂಧಿಸಿದ ಆದೇಶವನ್ನು ನಂತರ ಬರೆಸಲಾಗುವುದು ಎಂದು ಹೇಳಿದೆ.
ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಸ್ಥಳೀಯ ವ್ಯಕ್ತಿಯೊಬ್ಬರು ವಕೀಲ ಕುಲದೀಪ್ ತಮ್ಮ ಮನೆಯ ಗೇಟ್ ಕದ್ದಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಈ ಮೇರೆಗೆ ಪಿಎಸ್’ಐ ಸುತೇಶ್ ಕೆ.ಪಿ ಹಾಗೂ ಸಿಬ್ಬಂದಿ ಕುಲದೀಪ್ ಬಂಧಿಸಿ, ಅಮಾನವೀಯವಾಗಿ ಹಲ್ಲೆ ನಡೆಸಿದ್ದರು. ಕುಲದೀಪ್ ಮೇಲಿನ ಹಲ್ಲೆ ಖಂಡಿಸಿ ವಕೀಲ ಸಂಘಟನೆಗಳು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದವು. ಕುಲದೀಪ್ ತನ್ನ ಮೇಲಿನ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೋರಿ ದೂರು ನೀಡಿದ್ದರು. ಅದನ್ನು ಪೊಲೀಸರು ಪರಿಗಣಿಸಿದೇ ಹೋಗಿದ್ದರಿಂದ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.