ಕಾಲೇಜು ಅವರಣದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ನಿಷೇಧ ವಿಧಿಸಿರುವುದನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು ಪೀಠ ರಚಿಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಪಿ ಎಸ್ ನರಸಿಂಹ ಅವರ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ತುರ್ತಾಗಿ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಕೋರಿದರು.
ಹೋಳಿ ಹಬ್ಬದ ರಜೆಯ ಬಳಿಕ ಪ್ರಕರಣವನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸಿಜೆಐ ಹೇಳಿದರು. “ಐದು ದಿನಗಳ ಬಳಿಕ ಪರೀಕ್ಷೆ ನಿಗದಿಯಾಗಿದೆ” ಎಂದು ವಕೀಲರು ಪ್ರತಿಕ್ರಿಯಿಸಿದರು. ಇದಕ್ಕೆ ಸಿಜೆಐ ಅವರು “ನೀವು ಕೊನೆಯ ದಿನ ಬಂದಿದ್ದೀರಿ” ಎಂದರು. ಆಗ ವಕೀಲರು “ಇದಾಗಲೇ ಎರಡು ಬಾರಿ ಇದನ್ನು ಉಲ್ಲೇಖಿಸಲಾಗಿದೆ. 10 ದಿನಗಳ ಹಿಂದೆಯೂ ಉಲ್ಲೇಖಿಸಲಾಗಿತ್ತು” ಎಂದರು. ಈ ವೇಳೆ ಸಿಜೆಐ ಅವರು “ಪ್ರಕರಣವನ್ನು ಆಲಿಸಲು ನಾನು ಪೀಠ ರಚಿಸುತ್ತೇನೆ” ಎಂದು ಭರವಸೆ ನೀಡಿದರು.
ಜನವರಿ 23 ಮತ್ತು ಫೆಬ್ರವರಿ 22ರಂದು ಎರಡು ಬಾರಿ ಹಿಬಾಜ್ ಪ್ರಕರಣವನ್ನು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಕೋರಲಾಗಿತ್ತು. ಹಿಜಾಬ್ ನಿಷೇಧಿಸಲು ಅನುಮತಿಸುವುದಕ್ಕೆ ಬಲ ತಂದಿದ್ದ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ಕಳೆದ ಅಕ್ಟೋಬರ್ನಲ್ಲಿ ಸುಪ್ರೀಂ ಕೋರ್ಟ್ನ ವಿಭಾಗೀಯ ಪೀಠವು ಭಿನ್ನ ನಿಲುವು ತಳೆದಿತ್ತು.
ಇದಕ್ಕೂ ಮುನ್ನ, ಕರ್ನಾಟಕ ಹೈಕೋರ್ಟ್ ನಿಷೇಧವನ್ನು ಎತ್ತಿ ಹಿಡಿದಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನಿವೃತ್ತರಾಗಿರುವ ನ್ಯಾ. ಹೇಮಂತ್ ಗುಪ್ತಾ ಅವರು ಹಿಜಾಬ್ ನಿಷೇಧ ತೀರ್ಪು ಎತ್ತಿ ಹಿಡಿದರೆ, ನ್ಯಾ. ಸುಧಾಂಶು ಧುಲಿಯಾ ಅವರು ಸರ್ಕಾರದ ಆದೇಶ ವಜಾ ಮಾಡಿದ್ದರು. ಹೀಗಾಗಿ, ಪ್ರಕರಣವು ವಿಸ್ತೃತ ಪೀಠದ ಮುಂದೆ ವಿಚಾರಣೆಗೆ ಬಾಕಿ ಇದೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.