ಮನೆ ಕಾನೂನು ಹಿಜಾಬ್​ ವಿವಾದ: ಜಡ್ಜ್​ಗಳಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್

ಹಿಜಾಬ್​ ವಿವಾದ: ಜಡ್ಜ್​ಗಳಿಗೆ ಬೆದರಿಕೆ ಹಾಕಿದ್ದ ಆರೋಪಿಗೆ ನೋಟಿಸ್ ನೀಡಿದ ಸುಪ್ರೀಂಕೋರ್ಟ್

0

ನವದೆಹಲಿ(New Delhi): ಹಿಜಾಬ್(hijab) ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ(Karnataka High court Judges) ಬೆದರಿಕೆ ಹಾಕಿದ್ದ ಆರೋಪಿ ಸಲ್ಲಿಸಿದ್ದ ಮನವಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ವ್ಯಕ್ತಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿತ್ತು. ಆದರೆ, ಆ ಪ್ರಕರಣವನ್ನು ಮಧುರೈಗೆ ವರ್ಗಾಯಿಸುವಂತೆ ಅಥವಾ ವಜಾಗೊಳಿಸುವಂತೆ ಆರೋಪಿ ಅರ್ಜಿ ಸಲ್ಲಿಸಿದ್ದನು.

ತಮಿಳುನಾಡು ಮೂಲದ ಇಸ್ಲಾಮಿಕ್ ಸಂಘಟನೆಗಳಿಂದ ಕರ್ನಾಟಕ ಹೈಕೋರ್ಟ್ ಜಡ್ಜ್​ಗಳಿಗೆ ಜೀವ ಬೆದರಿಕೆ ಹಾಕಿರುವ ಆರೋಪವಿದ್ದು, ಈ ಬೆದರಿಕೆಯ ನಂತರ ಮುಖ್ಯ ನ್ಯಾಯಮೂರ್ತಿ ಸೇರಿ ಮೂವರು ನ್ಯಾಯಮೂರ್ತಿಗಳಿಗೆ ವೈ ಶ್ರೇಣಿಯ ಭದ್ರತೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ನಂತರ ತನಿಖೆ ನಡೆಸಿದ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.ಇದರಲ್ಲಿ ಓರ್ವ ವ್ಯಕ್ತಿ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​​ನಿಂದ ಮಧುರೈಗೆ ಪ್ರಕರಣವನ್ನು ವರ್ಗಾಯಿಸಲು ಅಥವಾ ವಜಾಗೊಳಿಸಲು ಮನವಿ ಸಲ್ಲಿಸಿದ್ದನು.