ಮನೆ ರಾಷ್ಟ್ರೀಯ ಹಿಮಾಚಲ ಪ್ರದೇಶ: ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ

ಹಿಮಾಚಲ ಪ್ರದೇಶ: ವಂದೇ ಭಾರತ್ ಎಕ್ಸ್’ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ

0

ಶಿಮ್ಲಾ(Shimla): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು.

ಉನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು.

ಈ ವೇಳೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ‌ಉಪಸ್ಥಿತರಿದ್ದರು.

ಈ ರೈಲು ದೆಹಲಿ ಮತ್ತು ಅಂಬ್ ಅಂಡೌರಾ ನಡುವೆ ಸಂಚರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಿಯವಾಗಿ ವಿನ್ಯಾಸಗೊಳಿಸಲಾದ ಸೆಮಿ ಹೈಸ್ಪೀಡ್ ರೈಲುಗಳನ್ನು ‌ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಯೋಜನೆಯಡಿಯಲ್ಲಿ ನವದೆಹಲಿ – ವಾರಾಣಸಿ, ನವದೆಹಲಿ – ಕತ್ರಾ ಹಾಗೂ ಗಾಂಧಿನಗರ ಮತ್ತು ಮುಂಬೈ ನಡುವೆ ಓಡಿಸಲಾಗುತ್ತಿದೆ.

ಹಿಂದಿನ ಲೇಖನಹಿಜಾಬ್ ಪ್ರಕರಣ: ದ್ವಿಸದಸ್ಯ ಪೀಠ ಭಿನ್ನ ತೀರ್ಪು- ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಿದ ಸುಪ್ರೀಂಕೋರ್ಟ್
ಮುಂದಿನ ಲೇಖನಬೆಳೆಹಾನಿ: 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ವಿಡಿಯೋ ಕಾನ್ಫರೆನ್ಸ್