ಮನೆ ಅಂತಾರಾಷ್ಟ್ರೀಯ ಕೆನಡಾದಲ್ಲಿ ಹಿಂದೂ ದೇಗುಲ ವಿರೂಪಗೊಳಿಸಿದ ದುಷ್ಕರ್ಮಿಗಳು: ಚಂದ್ರ ಆರ್ಯ ಆಕ್ರೋಶ

ಕೆನಡಾದಲ್ಲಿ ಹಿಂದೂ ದೇಗುಲ ವಿರೂಪಗೊಳಿಸಿದ ದುಷ್ಕರ್ಮಿಗಳು: ಚಂದ್ರ ಆರ್ಯ ಆಕ್ರೋಶ

0

ಟೊರೊಂಟೊ: ಕೆನಡಾದ ಬ್ರಾಂಪ್ಟನ್‌ ಪ್ರದೇಶದಲ್ಲಿ ದುಷ್ಕರ್ಮಿಗಳು ಹಿಂದೂ ದೇಗುಲವನ್ನು ವಿರೂಪಗೊಳಿಸಿರುವುದಕ್ಕೆ ಭಾರತ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಗುಂಪುಗಳ ಹಿಂದೂ ದೇಗುಲಗಳ ಮೇಲಿನ ದಾಳಿಯ ಸರಣಿಗೆ ಬ್ರಾಂಪ್ಟನ್‌’ನಲ್ಲಿರುವ ಗೌರಿ ಶಂಕರ ಮಂದಿರದ ಮೇಲಿನ ದಾಳಿ ಸೇರ್ಪಡೆಯಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲಿದ್ದ ದ್ವೇಷ, ಈಗ ಹಿಂದೂ ದೇವಾಲಯಗಳ ಮೇಲಿನ ತೋಳ್ಬಲದ ದಾಳಿಯಾಗಿ ಮಾರ್ಪಟ್ಟಿದೆ. ಮುಂದೇನು? ಇದನ್ನು ಗಂಭೀರವಾಗಿ ಪರಿಗಣಿಸುವಂತೆ ನಾನು ಕೆನಡಾ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಬ್ರಾಂಪ್ಟನ್‌’ನಲ್ಲಿರುವ ಗೌರಿ ಶಂಕರ ಮಂದಿರದ ಮೇಲಿನ ದಾಳಿಯನ್ನು ಖಂಡಿಸಿ ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಕಚೇರಿ ಮಂಗಳವಾರ ಹೇಳಿಕೆಯನ್ನೂ ಬಿಡುಗಡೆ ಮಾಡಿದೆ.

ವಿಧ್ವಂಸಕ ಕೃತ್ಯವು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳನ್ನು ತೀವ್ರವಾಗಿ ಘಾಸಿಗೊಳಿಸಿದೆ. ಕೆನಡಾದ ಅಧಿಕಾರಿಗಳಿಗೆ ನಮ್ಮ ಆತಂಕವನ್ನು ತಿಳಿಸಿದ್ದೇವೆ ಎಂದು ಕಾನ್ಸುಲೇಟ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.