ಹಿರಿಯೂರು (ಚಿತ್ರದುರ್ಗ): ಬಿರುಗಾಳಿ ಸಹಿತ ಸುರಿದ ಮಳೆಗೆ ಉದುರಿ ಬಿದ್ದ ಹುಣಸೆ ಹಣ್ಣು ತಿಂದು 12 ಕುರಿ ಮೃತಪಟ್ಟ ಘಟನೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿ ಕರಿಯಾಲ ಗ್ರಾಮದಲ್ಲಿ ನಡೆದಿದೆ.
ರಾಮಕೃಷ್ಣಪ್ಪ ಎಂಬುವವರ 70 ಕುರಿಗಳಲ್ಲಿ 12 ಕುರಿಗಳು ಸಾವನ್ನಪ್ಪಿದ್ದು, ಇನ್ನೂ ಹತ್ತು ಕುರಿಗಳ ಸ್ಥಿತಿ ಗಂಭೀರವಾಗಿದೆ. ಪಶುವೈದ್ಯ ಡಾ. ಅರುಣ್ ಚಿಕಿತ್ಸೆ ನೀಡಿದ್ದು, ಕೆಲವು ಕುರಿಗಳು ಸುಧಾರಿಸಿಕೊಳ್ಳುತ್ತಿವೆ.
ದರ ಕುಸಿತದ ಕಾರಣಕ್ಕೆ ಹುಣಸೆ ಹಣ್ಣು ಕೀಳದೇ ರೈತರು ಮರದಲ್ಲಿಯೇ ಬಿಟ್ಟುದ್ದರು. ಭಾನುವಾರ ರಾತ್ರಿ ಸುರಿದ ಬಿರುಗಾಳಿ ಮಳೆಗೆ ಹಣ್ಣು ಉದುರಿದ್ದವು. ಸೋಮವಾರ ಸಂಜೆ ಈ ಹಣ್ಣುಗಳನ್ನು ಕುರಿಗಳು ತಿಂದಿದ್ದವು. ಹುಣಸೆಹಣ್ಣು ಕುತ್ತಿಗೆಯಲ್ಲಿ ಸಿಕ್ಕಿಕೊಂಡಿದ್ದರೆ, ಬೀಜಗಳು ಹೊಟ್ಟೆ ಒಳಗೆ ಸೇರಿ ಊದಿಕೊಂಡ ಪರಿಣಾಮ ಕುರಿಗಳು ಸಾವನ್ನಪ್ಪಿವೆ ಎಂದು ಮೂಲಗಳು ಮಾಹಿತಿ ನೀಡಿವೆ. ಕುರಿಗಳು ಸಾವನ್ನಪ್ಪಿವೆ ಎಂದು ಮೂಲಗಳು ಮಾಹಿತಿ ನೀಡಿವೆ.
ಕಿಕ್ಕಿರಿದ ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.