ಛತ್ತೀಸ್’ಗಢ/ಆಂಧ್ರ ಪ್ರದೇಶ: ಆಂಧ್ರ ಪ್ರದೇಶ ಮತ್ತು ಛತ್ತೀಸ್’ಗಢ ರಾಜ್ಯಗಳಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸುಮಾರು 13 ಜನರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ.
ಆಂಧ್ರ ಪ್ರದೇಶ: ಲಾರಿ ಮತ್ತು ತೂಫಾನ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಂಡಾಪುರಂ ತಾಲೂಕಿನ ಚಿತ್ರಾವತಿ ಸೇತುವೆ ಬಳಿ ಇಂದು ನಡೆದಿದೆ. ಕಾಕಿನಾಡ ಜಿಲ್ಲೆಯಲ್ಲಿ ಆಟೋ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಆರು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ತಾಡಿಪತ್ರಿ ಭಾಗದ ಜನರು ತೂಫಾನ್ ವಾಹನದಲ್ಲಿ ತಿರುಪತಿ ತಿರುಮಲ ಸ್ವಾಮಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಅಪಘಾತವಾಗಿದೆ. ತಾಡಪತ್ರಿ ಕಡೆಯಿಂದ ಬಂದ ಲಾರಿ ಅತಿವೇಗದಲ್ಲಿ ಸಂಚರಿಸುತ್ತಿದ್ದ ತೂಫಾನ್ ವಾಹನಕ್ಕೆ ಡಿಕ್ಕಿ ಹೊಡೆಯಿತು. ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರು. ಗಂಭೀರ ಗಾಯಗೊಂಡವರನ್ನು ತಾಡಪತ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಛತ್ತೀಸ್’ಗಢ: ಒಂದು ಮಗು ಮತ್ತು ಮಹಿಳೆಯರು ಸೇರಿ 6 ಜನರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಲೋದಬಜಾರ್’ನಲ್ಲಿ ಭಾನುವಾರ ರಾತ್ರಿ ನಡೆದಿದೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ನಿನ್ನೆ ಸಂಭವಿಸಿದ ಅಪಘಾತದಲ್ಲಿ ಪಿಕಪ್ ವಾಹನಕ್ಕೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆಯಿತು. ಭಾನುವಾರ ರಾತ್ರಿ 10:30ಕ್ಕೆ ಪಲಾರಿಯಿಂದ 6 ಕಿ.ಮೀ ದೂರದಲ್ಲಿರುವ ಗೊಂಡ ಪುಲಿಯಾ ಗ್ರಾಮದ ಬಳಿ ಅಪಘಾತ ನಡೆದಿದೆ.12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ.
ಸಮುದಾಯ ಆರೋಗ್ಯ ಕೇಂದ್ರ ಪಲಾರಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಬಲೋದಬಜಾರ್’ನಲ್ಲಿ ಚಿಕಿತ್ಸೆ ನಡೆಯುತ್ತಿದೆ. ತಲೆಮರೆಸಿಕೊಂಡಿರುವ ಟ್ರಕ್ ಚಾಲಕನನ್ನು ಬಂಧಿಸಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.