ಮನೆ ರಾಷ್ಟ್ರೀಯ ಭೀಕರ ರಸ್ತೆ ಅಪಘಾತ: ಪ್ರತ್ಯೇಕ ಪ್ರಕರಣದಲ್ಲಿ 13 ಜನರ ಸಾವು

ಭೀಕರ ರಸ್ತೆ ಅಪಘಾತ: ಪ್ರತ್ಯೇಕ ಪ್ರಕರಣದಲ್ಲಿ 13 ಜನರ ಸಾವು

0

ಛತ್ತೀಸ್‌’ಗಢ​/ಆಂಧ್ರ ಪ್ರದೇಶ: ಆಂಧ್ರ ಪ್ರದೇಶ ಮತ್ತು ಛತ್ತೀಸ್’ಗಢ ರಾಜ್ಯಗಳಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸುಮಾರು 13 ಜನರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ.

Join Our Whatsapp Group

ಆಂಧ್ರ ಪ್ರದೇಶ: ಲಾರಿ ಮತ್ತು ತೂಫಾನ್​ ವಾಹನ ಮುಖಾಮುಖಿ ಡಿಕ್ಕಿಯಾಗಿ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಂಡಾಪುರಂ ತಾಲೂಕಿನ ಚಿತ್ರಾವತಿ ಸೇತುವೆ ಬಳಿ ಇಂದು ನಡೆದಿದೆ. ಕಾಕಿನಾಡ ಜಿಲ್ಲೆಯಲ್ಲಿ ಆಟೋ ಮತ್ತು ಖಾಸಗಿ ಬಸ್​​​ ನಡುವೆ ಡಿಕ್ಕಿಯಾಗಿ ಆರು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ತಾಡಿಪತ್ರಿ ಭಾಗದ ಜನರು ತೂಫಾನ್​ ವಾಹನದಲ್ಲಿ ತಿರುಪತಿ ತಿರುಮಲ ಸ್ವಾಮಿಯ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಅಪಘಾತವಾಗಿದೆ. ತಾಡಪತ್ರಿ ಕಡೆಯಿಂದ ಬಂದ ಲಾರಿ ಅತಿವೇಗದಲ್ಲಿ ಸಂಚರಿಸುತ್ತಿದ್ದ ತೂಫಾನ್​ ವಾಹನಕ್ಕೆ ಡಿಕ್ಕಿ ಹೊಡೆಯಿತು. ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರು. ಗಂಭೀರ ಗಾಯಗೊಂಡವರನ್ನು ತಾಡಪತ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಛತ್ತೀಸ್‌’ಗಢ: ಒಂದು ಮಗು ಮತ್ತು ಮಹಿಳೆಯರು ಸೇರಿ 6 ಜನರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬಲೋದಬಜಾರ್‌’ನಲ್ಲಿ ಭಾನುವಾರ ರಾತ್ರಿ ನಡೆದಿದೆ. 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ನಿನ್ನೆ ಸಂಭವಿಸಿದ ಅಪಘಾತದಲ್ಲಿ ಪಿಕಪ್​ ವಾಹನಕ್ಕೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆಯಿತು. ಭಾನುವಾರ ರಾತ್ರಿ 10:30ಕ್ಕೆ ಪಲಾರಿಯಿಂದ 6 ಕಿ.ಮೀ ದೂರದಲ್ಲಿರುವ ಗೊಂಡ ಪುಲಿಯಾ ಗ್ರಾಮದ ಬಳಿ ಅಪಘಾತ ನಡೆದಿದೆ.12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 10ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ.

ಸಮುದಾಯ ಆರೋಗ್ಯ ಕೇಂದ್ರ ಪಲಾರಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಬಲೋದಬಜಾರ್‌’ನಲ್ಲಿ ಚಿಕಿತ್ಸೆ ನಡೆಯುತ್ತಿದೆ. ತಲೆಮರೆಸಿಕೊಂಡಿರುವ ಟ್ರಕ್ ಚಾಲಕನನ್ನು ಬಂಧಿಸಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಹಿಂದಿನ ಲೇಖನಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯ: ಹೈಕಮಾಂಡ್ ಅಂಗಳಕ್ಕೆ ಸಿಎಂ ಆಯ್ಕೆ ವಿಚಾರ
ಮುಂದಿನ ಲೇಖನSSLC ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ