ಮನೆ ಅಪರಾಧ ಕೆಎಸ್’ಆರ್’ಟಿಸಿ ಬಸ್ – ಲಾರಿ ನಡುವೆ ಭೀಕರ ಅಪಘಾತ: ದಂಪತಿ ಸಾವು, 20 ಮಂದಿಗೆ ಗಾಯ

ಕೆಎಸ್’ಆರ್’ಟಿಸಿ ಬಸ್ – ಲಾರಿ ನಡುವೆ ಭೀಕರ ಅಪಘಾತ: ದಂಪತಿ ಸಾವು, 20 ಮಂದಿಗೆ ಗಾಯ

0

ಹೊಸಕೋಟೆ(Hosakote): ಕೆಎಸ್​​ಆರ್​​ಟಿಸಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹೊಸಕೋಟೆಯ ಮೈಲಾಪುರ ಗೇಟ್ ಬಳಿ ನಡೆದಿದೆ.

ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್​​ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿತ್ತೂರು ಮೂಲದ ಬಾಲಮುರುಗನ್(45) ಹಾಗೂ ಸೆಲ್ವಿ (36) ದಂಪತಿ ಸಾವನ್ನಪ್ಪಿದ್ದಾರೆ. ಇವರ ನಾಲ್ಕು ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದೆ.

ಭಾನುವಾರ ರಾತ್ರಿ 9:30ಕ್ಕೆ ಆಂಧ್ರ ಪ್ರದೇಶದ ಬಲಿಜಖಂಡ್ರಿಗದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ತಡ ರಾತ್ರಿ 1:45ರ ಸಮಯಕ್ಕೆ ರಾಷ್ಟ್ರೀಯ ಹೆದ್ದಾರಿ ಹೊಸಕೋಟೆ ಸಮೀಪದ ಮೈಲಾಪುರ ಗೇಟ್ ಬಳಿ ಕಲ್ಲು ತುಂಬಿದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗ್ತಿದೆ.

ಅಪಘಾತ ಸಂಭವಿಸಿದ ತಕ್ಷಣ ಚಾಲಕ ಬಸ್​​ ಬಿಟ್ಟು ಪರಾರಿಯಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತು ಹೊಸಕೋಟೆ ಠಾಣೆ ಇನ್ಸ್​​ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂದಿನ ಲೇಖನಮಳೆ ಹಾನಿ: ಬಿಬಿಎಂಪಿಗೆ 350 ಕೋಟಿ ರೂ. ನೀಡಲು ಸರ್ಕಾರ ಒಪ್ಪಿಗೆ
ಮುಂದಿನ ಲೇಖನಹೈದರಾಬಾದ್‌: ಉಗ್ರ ದಾಳಿಗೆ ಸಂಚು ರೂಪಿಸಿದ್ದ ಮೂವರ ಬಂಧನ