ಹುಬ್ಬಳ್ಳಿ: ಕೇವಲ ಐದು ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೊಬ್ಬ ಕೊಲೆಯಾಗಿರುವ ಘಟನೆ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ.
ನಿಂಗಪ್ಪ ಬೂದಪ್ಪ ನವಲೂರ (28) ಕೊಲೆಯಾದ ಮದುಮಗ.
ತೋಟದ ಮನೆಯಲ್ಲಿ ಮಲಗಿದ್ದ ಸಮಯದಲ್ಲಿ ಕಣ್ಣಿಗೆ ಖಾರದಪುಡಿ ಎರಚಿ, ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ನಿಂಗಪ್ಪ ಜೂನ್ 7 ರಂದು ಹಸೆ ಮಣೆ ಏರಬೇಕಿತ್ತು. ತಾವರಗೆರೆ ಗ್ರಾಮದ ಯುವತಿ ಜೊತೆ ಆಕೆಯ ಮದುವೆ ನಿಶ್ಚಿಯವಾಗಿತ್ತು. ಮದುವೆ ದಿನ ಹತ್ತಿರ ಬಂದಿದ್ದರಿಂದ ನಿಂಗಪ್ಪ ಅವರ ಮನೆಯಲ್ಲಿ ಎಲ್ಲ ತಯಾರಿಗಳು ನಡೆಯುತ್ತಿದ್ದವು. ಆದರೆ, ಇದೀಗ ನಿಂಗಪ್ಪನ ಹತ್ಯೆಯಾಗಿರುವುದು ಕುಟುಂಬಕ್ಕೆ ಭಾರೀ ಆಘಾತವಾಗಿದೆ. ಮಗನನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಇನ್ನು ಕೊಲೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.