ಶಿವಮೊಗ್ಗ: ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ನಿರ್ದೋಷಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ನಿನ್ನೆ ರಾತ್ರಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ನೀಡಿದ್ದು ಈ ಕುರಿತು ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಂತೋಷ್ ರದ್ದು ಆತ್ಮಹತ್ಯೆಯೋ, ಹತ್ಯೆಯೋ ಎಂಬ ಅನುಮಾನ ಶುರುವಾಗಿದೆ ಎಂದರು.
ನನ್ನ ವಿರುದ್ದ ಷಡ್ಯಂತ್ರ ನಡೆದಿದೆ ಎಂಬುದು ಎಲ್ಲರ ಅಭಿಪ್ರಾಯ. ಇದು ಆತ್ಮಹತ್ಯೆಯೋ ಹತ್ಯೆಯೋ ಎಂಬ ಅನುಮಾನ ಶುರುವಾಗಿದೆ. ಈ ಕುರಿತು ಸಮಗ್ರ ತನಿಖೆಯಾಗಬೇಕಿದೆ. ಸಂತೋಷ ರನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಯಾರಿದ್ದಾರೆ. ಇದರ ಹಿಂದೆ ಡಿಕೆಶಿ ಇದ್ದಾರಾ ಎಂಬುದು ಬಯಲಾಗಬೇಕಿದೆ. ಆ ನಂತರ ನಾನು ಡಿಕೆಶಿ ಬಗ್ಗೆ ಮಾತನಾಡುತ್ತೇನೆ. ನಾನು ಬಿಜೆಪಿ ನಾಯಕರ ಜತೆ ಚರ್ಚಿಸಿಯೇ ರಾಜೀನಾಮೆ ನೀಡಿದ್ದೇನೆ ಎಂದರು.
ನಾನು ತಪ್ಪು ಮಾಡಿಲ್ಲ ನಾನು ನಿರ್ದೋಷಿ ಎಂಬ ಪ್ರೀತಿ ರಾಜ್ಯಾದ್ಯಂತ ಇದೆ. ನನಗೆ ಪ್ರೀತಿ ತೋರಿದ ಎಲ್ಲರಿಗೂ ನಮಸ್ಕಾರ. ನಾನು ಕುಗ್ಗಿಲ್ಲ. ನನಗೆ ಆನೆ ಬಲ ಬಂದಿದೆ. ಎಲ್ಲಾ ಶ್ರೀಗಳ ಆಶೀರ್ವಾದ ಸಿಕ್ಕಿದೆ. ನಾನು ಬಿಜೆಪಿ ಕಾರ್ಯಕಾರಣಿಗೆ ಹಾಜರಾಗಲ್ಲ ಏಪ್ರಿಲ್ 20ಕ್ಕೆ ಮೊಮ್ಮಗನ ಮದುವೆ ಇದೆ. ಮದುವೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ ಎಂದರು.