ಮನೆ ರಾಜ್ಯ ಶಿಗ್ಗಾಂವಿಯಿಂದಲೇ ಸ್ಪರ್ಧೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ಶಿಗ್ಗಾಂವಿಯಿಂದಲೇ ಸ್ಪರ್ಧೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

0

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮಾಡಿದ ಸಾಧನೆಯ ರಿಪೋರ್ಟ್ ಹಿಡಿದು  ನಾವು ಮತ ಕೇಳುತ್ತೇವೆ. ಕೊರೋನಾ ಮತ್ತು ಪ್ರವಾಹ ಸಂಧರ್ಭದಲ್ಲೂ ಅಭಿವೃದ್ಧಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷದ ದುರಾಡಳಿತ ಬಗ್ಗೆಯೂ ಹೇಳುತ್ತೇವೆ. ಕಾಂಗ್ರೆಸ್ ನಾಯಕರು ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ.  ಆದರೆ ನಾವು ಧರ್ಮ ಜೋಡಣೆ ಕೆಲಸ ಮಾಡುತಿದ್ದೇವೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ 50ಕ್ಕೂ ಹೆಚ್ಚು ಹಗರಣಗಳು ನಡೆದಿದೆ.  ನಮ್ಮ ಸರ್ಕಾರದ ವೇಳೆ ಭ್ರಷ್ಟಾಚಾರ ವಿಚಾರದಲ್ಲಿ ರಾಜಿ ಇಲ್ಲ. ಭ್ರಷ್ಟಾಚಾರ ಬಗ್ಗೆ ಮಾತನಾಡುವ ನೈತಿಕತೆ  ಕಾಂಗ್ರೆಸ್ ಗೆ ಇಲ್ಲ ಎಂದು ಕಿಡಿಕಾರಿದರು.

ನಾವು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇವೆ. ದುಡ್ಡೇ ದೊಡ್ಡಪ್ಪ ಬದಲಾಗಿ ದುಡಿಮೆಯೇ ದೊಡ್ಡಪ್ಪ ಆಗಿದೆ. ನನ್ನ ಸರ್ಕಾರದ ಆಡಳಿತಾತ್ಮಕ ನಿರ್ಧಾರದಿಂದ ರಾಜ್ಯ ಸದೃಢವಾಗಿದೆ  ಎಂದು ತಿಳಿಸಿದರು.

ಹಿಂದಿನ ಲೇಖನವಿಧಾನ ಪರಿಷತ್ ಸ್ಥಾನಕ್ಕೆ ಆಯನೂರು ಮಂಜುನಾಥ್ ರಾಜೀನಾಮೆ
ಮುಂದಿನ ಲೇಖನಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣ: ಲಡಾಖ್ ಕೇಂದ್ರಾಡಳಿತ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿದ ಕಾಶ್ಮೀರ ಹೈಕೋರ್ಟ್