ಮಂಡ್ಯ: ಈ ಬಾರಿ ಚುನಾವಣೆಯಲ್ಲಿ ವರುಣಾ ಸೇರಿದಂತೆ ಯಾವ ಕ್ಷೇತ್ರದಿಂದಲೂ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ವರುಣಾ ಕ್ಷೇತ್ರ ಅಥವಾ ಬೇರೆ ಯಾವ ಕ್ಷೇತ್ರದಿಂದಲೂ ಸ್ಪರ್ಧೆ ಮಾಡಲ್ಲ. ತಂದೆಯವರ ಪರವಾಗಿ ಜನವರಿಯಿಂದಲೇ ನಾನು ಪ್ರಚಾರ ಶುರು ಮಾಡಿದ್ದೇನೆ. ವರುಣಾ ಕ್ಷೇತ್ರ ಯಾವೊಬ್ಬ ವ್ಯಕ್ತಿಗೆ ಸೇರಿದ್ದಲ್ಲ. ತಂದೆಗಾಗಿ ನಾನು ಕ್ಷೇತ್ರ ತ್ಯಾಗ ಮಾಡಿಲ್ಲ. ಆ ಕ್ಷೇತ್ರದ ಮತದಾರರಿಗೆ. ತಂದೆಯವರ ಕೊನೆ ಚುನಾವಣೆ ಹೀಗಾಗಿ ವರುಣಾದಲ್ಲಿ ನಿಲ್ಲಬೇಕೆಂಬುದು ಜನರ ಅಭಿಪ್ರಾಯ ಎಂದು ತಿಳಿಸಿದರು.
ಒಬ್ಬ ಮಗನಾಗಿ ತಂದೆ ಸಿಎಂ ಆಗಲಿ ಅಂತಾ ಯಾರಿಗೆ ಆಸೆ ಇರಲ್ಲ ಹೇಳಿ. ಖಂಡಿತ ಸಿದ್ಧರಾಮಯ್ಯ ಸಿಎಂ ಆಗಬೇಕು ಅನ್ನೋದು ನನ್ನ ಆಸೆ. ಈ ಹಿಂದೆ ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಉತ್ತಮ ಆಡಳಿತ ನೀಡಿದ್ದರು. ಮತ್ತೆ ಸಿಎಂ ಆದರೇ ರಾಜ್ಯವನ್ನ ಅಭಿವೃದ್ದಿ ಪಥದತ್ತ ಕೊಂಡೊಯ್ಯುತ್ತಾರೆ. ವರುಣಾ ಕ್ಷೇತ್ರ ಕಾಂಗ್ರೆಸ್ ಭದ್ರೋಟೆ. ಹೀಗಾಗಿ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
ಮನೆ ಮಾರಾಟಕ್ಕೆಮನೆ ಮಾರಾಟಕ್ಕೆ….
ಅಮೆರಿಕದಲ್ಲೂ ಕೂಡ ಹೆಚ್ಚಾಗುತ್ತಿದ್ದಾರೆ ಭಾರತೀಯರು.
27ರೂ. ಗೆ, 28000 ಸಾವಿರ ದಂಡ.
ಸಿದ್ದರಾಮಯ್ಯ ಅವರಿಗೆ ಫ್ರೀ ಟಿಕೆಟ್ ಹಾರಾ ಅರ್ಪಣೆ…..
ಬಿರುಗಾಳಿಗೆ ಕುಸಿದು ಬಿದ್ದ ಮೊಬೈಲ್ ಟವರ್.
ನಿಜವಾಗಲೂ ಇತ್ತು ವಾಸುಕಿ ಸರ್ಪ….
ರಮ್ಯಾ ಔಟ್, ಐಶ್ವರ್ಯ ಎಂಟ್ರಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.