ಮೈಸೂರು: ಬಿಜೆಪಿಯನ್ನು ಕಟ್ಟಿ ಬೆಳಿಸಿದ ಯಡಿಯೂರಪ್ಪ ಅವರನ್ನ ಮೂಲೆ ಗುಂಪು ಮಾಡಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಮತ್ತೆ ಏನಾದರೂ ಅಧಿಕಾರಕ್ಕೆ ಬಂದರೆ ಬಿ.ಎಲ್ ಸಂತೋಷ್ ಅಥವಾ ಪ್ರಹ್ಲಾದ್ ಜೋಷಿ ಸಿಎಂ ಆಗ್ತಾರೆ ಹೊರತು ಲಿಂಗಾಯತರಿಗೆ ಬಿಟ್ಟಕೊಡಲ್ಲ. ವೀರಶೈವ ಲಿಂಗಾಯತ ಸಮುದಾಯ ಅರ್ಥ ಮಾಡಿಕೊಳ್ಳಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.
ಶಾಸಕ ಸಿಟಿ ರವಿ ವೀರಶೈವ ಲಿಂಗಾಯತ ವಿರುದ್ಧ ಮಾತನಾಡಿರುವ ಆಡಿಯೋ ವೈರಲ್ ವಿಚಾರ ಕುರಿತು ಸುದ್ದಿಗೋಷ್ಟಿಯಲ್ಲಿ ಪ್ರತಿಕ್ರಿಯಿಸಿದ ಅವರು, ಲಿಂಗಾಯತ ಸಮುದಾಯವನ್ನು ಮೂಲೆ ಗುಂಪು ಮಾಡಲು ಬಿಜೆಪಿಯ ಮುಖಂಡರು ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಧ್ರುವನಾರಾಯಣ್ ಸಾವು ಕಾಂಗ್ರೆಸ್ ಪಕ್ಷದ ಒತ್ತಡದಿಂದ ಆಗಿದ್ದು ಎಂದು ಹೇಳಿಕೆ ಕೊಟ್ಟಿದ್ದ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಗುಡುಗಿದ ಎಂ.ಲಕ್ಷ್ಮಣ್, ಛಲವಾದಿ ಎಂದು ಹೆಸರು ಇಟ್ಟುಕೊಂಡಿದ್ದೀಯಲ್ಲಪ್ಪಾ ನಿನಗೆ ಮಾನ ಮರ್ಯಾದೆ ಇದಿಯಾ. ಕಾಂಗ್ರೆಸ್ ಪಕ್ಷದಿಂದ ಎಲ್ಲವನ್ನೂ ಪಡೆದುಕೊಂಡು ಹೋಗಿ ಈಗ ಅವರಿಗೆ ದ್ರೋಹ ಮಾಡುವ ಕೆಲಸ ಮಾಡುತ್ತಿದ್ದೀರಾ.? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ, ಎಚ್ ಸಿ ಮಹಾದೇವಪ್ಪ ಅವರ ಬಗ್ಗೆ ಧ್ರುವನಾರಾಯಣ್ ಬಗ್ಗೆ ಹಗುರವಾಗಿ ಮಾತನಾಡುತ್ತೀರಾ.? ನಮ್ಮ ಪಕ್ಕದಲ್ಲಿರುವ ದಲಿತ ಸಮುದಾಯದವರಿಗೆ ಕೇಳಿಕೊಳ್ಳುತ್ತೇನೆ ಇಂತವರಿಗೆ ಜನ ಕಲ್ಲು ತೆಗೆದುಕೊಂಡು ಹೊಡಿಬೇಕು ಎಂದು ವಾಗ್ದಾಳಿ ನಡೆಸಿದರು.
ಉರಿಗೌಡ ಮತ್ತು ನಂಜೇಗೌಡ ವಿಚಾರ ಕುರಿತು ಮಾತನಾಡಿದ ಕಾಂಗ್ರೆಸ್ ವಕ್ತಾರ ಲಕ್ಷಣ್, ಇದು ಬಿಜೆಪಿಯವರ ಕುತಂತ್ರ. ಒಕ್ಕಲಿಗರು ಮತ್ತು ಮುಸ್ಲಿಮರ ನಡುವೆ ದ್ವೇಷ ಮನೋಭಾವನೆ ಬಿತ್ತುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ಕೂಡಲೇ ಸಚಿವ ಅಶ್ವಥ್ ನಾರಾಯಣ ಮತ್ತು ಸಿಟಿ ರವಿ ಹಾಗೂ ಶೋಭಾ ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.