ಮೈಸೂರು(Mysuru): ರೈತರ ಪಂಪ್ ಸೆಟ್’ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಲು ಮುಂದಾದರೆ ಅದನ್ನು ಕಿತ್ತೊಗೆಯುವ ಆಂದೋಲನವನ್ನು ಕಾಂಗ್ರೆಸ್ ಆರಂಭಿಸಲಿದೆ ಎಂದು ಕೆಪಿಸಿಸಿ ಹಿಂದುವಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ಮಂಗಳವಾರ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರಿಗೆ ದೊರೆಯುತ್ತಿದ್ದ ಸಬ್ಸಿಡಿಗಳನ್ನು ತೆಗೆಯಲಾಗಿದೆ. ರಸಗೊಬ್ಬರ, ಪರಿಕರಗಳ ಬೆಲೆ ಹೆಚ್ಚಾಗಿದೆ. ಬೆಂಬಲ ಬೆಲೆಯೂ ಸಿಗುತ್ತಿಲ್ಲ. ಸಂಕಷ್ಟಕ್ಕೆ ಸಿಲುಕಿರುವಾಗ ಮೀಟರ್ ಅಳವಡಿಕೆಗೆ ಮುಂದಾಗಿರುವುದು ರೈತರನ್ನು ನೆಲಕಚ್ಚಿಸುವ ಪ್ರಹಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಮಿಷನ್ ಲಾಭವನ್ನಷ್ಟೇ ನೋಡುತ್ತಿರುವ ಬಿಜೆಪಿಗೆ ಜನರ ಸಂಕಷ್ಟ ಅರ್ಥವಾಗುತ್ತಿಲ್ಲ. ಮೊಸರಿಂದ ಹಿಡಿದು ಹೆಣ ಸುಡುವವರೆಗೂ ತೆರಿಗೆ ಹೊರೆ ಹಾಕಲಾಗಿದೆ. ಸಾರ್ವಜನಿಕ ಉದ್ದಿಮೆಗಳನ್ನು ಉದ್ಯಮಿಗಳಿಗೆ ಮಾರಾಟ ಮಾಡಲಾಗಿದೆ. ಈಸ್ಟ್ ಇಂಡಿಯಾ ಕಂಪನಿಯಂತೆ ಜನರನ್ನು ಶೋಷಿಸುತ್ತಿದೆ. ಇದಕ್ಕಾಗಿ ಸ್ವಾತಂತ್ರ್ಯ ಹೋರಾಟ ಮತ್ತೆ ಆರಂಭಿಸಬೇಕಿದೆ ಎಂದರು.
ಸರ್ಕಾರದ ಮೇಲೆ ಜನರಿಗಿರುವ ಸಿಟ್ಟನ್ನು ವಿಷಯಾಂತರಿಸುವುದಕ್ಕಾಗಿಯೇ ಪಿಎಫ್ಐ, ಎಸ್’ಡಿಪಿಐ ಮೇಲೆ ಎನ್ಐಎ ಮೂಲಕ ಬಿಜೆಪಿ ದಾಳಿ ನಡೆಸುತ್ತಿದೆ. ಕಾಂಗ್ರೆಸ್ ದುರುದ್ದೇಶದ ದಾಳಿಗೆ ಹೆದರುವುದಿಲ್ಲ. ಬಿಜೆಪಿಯ ಭ್ರಷ್ಟಾಚಾರ, ಸುಳ್ಳುಗಳನ್ನು ಬಯಲಿಗೆಳೆಯುವುದನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ರಚನೆಯ ಉಪಾಧ್ಯಕ್ಷನಾಗಿದ್ದು, ಜಿಲ್ಲಾ ಮಟ್ಟದಲ್ಲೂ ಚಿಂತನ– ಮಂಥನ ನಡೆಸಿ ಜಿಲ್ಲಾವಾರು ಪ್ರಣಾಳಿಕೆ ತಯಾರಿಸಲಾಗುವುದು ಎಂದು ಮಾಹಿತಿ ನೀಡಿದರು.
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.